ಸ್ವಗ್ರಾಮ ಯಲವಾಳ ತೋಟದಲ್ಲಿ ಯೋಗ ಮಾಡಿದ ಬಿ.ಸಿ.ಪಾಟೀಲ್, ಸೋಮಶೇಖರ್
ಶಿವಮೊಗ್ಗ, ಜೂನ್ 21, ಕೃಷಿ ಸಚಿವ ಬಿ.ಸಿ.ಪಾಟೀಲರು ಮತ್ತು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸ್ವಗ್ರಾಮ ಯಲವಾಳ ಗ್ರಾಮದ ಕೃಷಿ ಸಚಿವರ ತೋಟದಲ್ಲಿ ಯೋಗ ಮಾಡುವ ಮೂಲಕ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ.ಪಾಟೀಲ, ಯೋಗ ಎನ್ನುವುದು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ನೆಮ್ಮದಿಯನ್ನೂ ನೀಡಬಲ್ಲದು. ಋಷಿಮುನಿಗಳು ಈ ಹಿಂದೆ ಆಚರಿಸಿ ಅನುಸರಿಸುತ್ತಿದ್ದ ಯೋಗವನ್ನು ಇಂದಿಗೂ ನಮ್ಮ ದೇಶದಲ್ಲಿ ಪಾರಂಪರಿಕವಾಗಿ ಮುಂದುವರೆಸಿಕೊಂಡು ಬರಲಾಗುತ್ತಿದೆ.
ಯೋಗ ದಿನಾಚರಣೆಯಂದು ಮಾತ್ರ ಯೋಗ ಮಾಡದೇ ಪ್ರತಿನಿತ್ಯ ವ್ಯಾಯಾಮ, ಯೋಗ ಮಾಡುವುದು ಒಳ್ಳೆಯದು. ಯೋಗ ಎಲ್ಲರ ದೈನಂದಿನ ಭಾಗವಾಗಬೇಕು ಎಂದು ಕರೆ ನೀಡಿದರು.ಯೋಗಕ್ಕೆ ತನ್ನದೇ ಆದ ಇತಿಹಾಸವಿದ್ದು, ಅದರ ಜೊತೆಗೂ ವೈಜ್ಞಾನಿಕವಾಗಿಯೂ ಯೋಗ ಸಾಬೀತಾಗಿದೆ. ಯೋಗವನ್ನು ಗುರುಗಳಿಂದ ಯೋಗಶಾಲೆಯಲ್ಲಿ ಕಲಿಯಬಹುದು. ಅಲ್ಲದೇ ಕೈಬೆರಳಲ್ಲಿರುವ ಮೊಬೈಲ್ನಲ್ಲಿ ಯೋಗ ಕಲಿಸುವ ಅದೆಷ್ಟೋ ಯೋಗದ ವಿಡಿಯೋ ಚಾನೆಲ್ಗಳು ಆ್ಯಪ್ಗಳು ಸಹ ಲಭ್ಯ. ನಮ್ಮ ದೇಹಕ್ಕೆ ಅನುಕೂಲಕರವಾಗುವಂತೆ ಆದಷ್ಟು ಮಾರ್ಗದರ್ಶನ ಪಡೆದೇ ಯೋಗವನ್ನು ಅನುಸರಿಸುವುದು ಉತ್ತಮ ಎಂದು ಬಿ.ಸಿ.ಪಾಟೀಲರು ಹೇಳಿದರು.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 