ನಾಲ್ಕು ರಾಷ್ಟ್ರಗಳ ಸರಣಿಗೆ ಮಹೂರ್ತ ಫಿಕ್ಸ್ ಮಾಡಲು ಲಂಡನ್ಗೆ ತೆರಳಿದ ಬಿಸಿಸಿಐ ಬಾಸ್
ನವದೆಹಲಿ, ಫೆ 6, ನಾಲ್ಕು ರಾಷ್ಟ್ರಗಳ ಸರಣಿಗೆ ಮಹೂರ್ತ ನಿಗದಿ ಮಾಡಲು ಭಾರತೀಯ ಕ್ರಿಕೆಟ್ ನಿಯಂತ್ರಣ ಅಧ್ಯಕ್ಷ ಸೌರವ್ ಗಂಗೂಲಿ ಅವರು ಇಂಗ್ಲೆಂಡ್ಗೆ ಪ್ರವಾಸ ಮಾಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.ಐಎಎನ್ಎಸ್ ಮೂಲಗಳ ಪ್ರಕಾರ ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ ಜತೆ ಬಿಸಿಸಿಐ ಬಾಸ್ ಗಂಗೂಲಿ ಮಾತುಕತೆ ನಡೆಸಲಿದ್ದಾರೆ. ಇವರ ಜತೆ ಕ್ರಿಕೆಟ್ ಆಸ್ಟ್ರೇಲಿಯಾ ಕೂಡ ಸೇರ್ಪಡೆಯಾಗಲಿದೆ ಎಂದು ತಿಳಿದುಬಂದಿದೆ.ಮುಂದಿನ ಪ್ರವಾಸದ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ನಾಲ್ಕು ದೇಶಗಳ ಸರಣಿ ಆಯೋಜನೆ ಕುರಿತು ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ಜತೆ ಚರ್ಚೆ ನಡೆಸಲು ಗಂಗೂಲಿ ಲಂಡನ್ಗೆ ತೆರಳಿದ್ದಾರೆ."ಹೌದು, ಗಂಗೂಲಿ ಅವರು ಇಲ್ಲಿನ ಈಡನ್ ಗಾರ್ಡನ್ಸ್ ಅಂಗಳದಿಂದ ಲಂಡನ್ಗೆ ತೆರಳಿದ್ದಾರೆ. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಹಾಗೂ ಸೌರವ್ ಗಂಗೂಲಿ ಅವರೊಂದಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಕೂಡ ಸೇರ್ಪಡೆಯಾಗಬಹುದು,'' ಎಂದು ಮೂಲಗಳು ತಿಳಿಸಿವೆ. ಬಿಸಿಸಿಐ ಅಧ್ಯಕ್ಷ ಸ್ಥಾನ ಅಲಂಕರಿಸಿದ ಬಳಿಕ ಸೌರವ್ ಗಂಗೂಲಿ ಅವರು ಭಾರತದಲ್ಲಿ ಮೊಟ್ಟ ಮೊದಲ ಬಾರಿ ಹೊನಲು ಬೆಳಕಿನ ಟೆಸ್ಟ್ ಪಂದ್ಯ ಆಯೋಜನೆ ಮಾಡಿದ್ದರು. ಇದಾದ ಬಳಿಕ ಭಾರತ, ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳೊಂದಿಗೆ ಮತ್ತೊಂದು ಅಗ್ರ ತಂಡದೊಂದಿಗೆ ನಾಲ್ಕು ದೇಶಗಳ ಸರಣಿಯನ್ನು ಪ್ರತಿ ವರ್ಷ ಆಯೋಜಿಸುವ ಬಗ್ಗೆ ಪ್ರಸ್ತಾವನೆ ಮಾಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 