ಬಿಡಿಸಿಸಿ ಬ್ಯಾಂಕಿನ ನಿರ್ದೇಶಕರ ಮುಸುಕಿನ ಗುದ್ದಾಟ : ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ರಾಜೀನಾಮೆ

ಬೆಳಗಾವಿ : ಕಳೆದ ಕೆಲವು ತಿಂಗಳುಗಳಿAದ ನಡೆಯುತ್ತಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರ ಮುಸುಕಿನ ಗುದ್ದಾಟಕ್ಕೆ ಬೇಸತ್ತು ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ಕೊನೆಗೂ ರಾಜೀನಾಮೆ ನೀಡಿದ್ದಾರೆ.

  ಕಳೆದ ಕೆಲವು ತಿಂಗಳುಗಿAದ ಬಿಡಿಸಿಸಿ ಬ್ಯಾಂಕಿನಲ್ಲಿ ಕೆಲ ನಿರ್ದೇಶಕರ ಹಾಗೂ ರಮೇಶ ಕತ್ತಿ ಅವರ ನಡುವೆ ವೈಮನಸ್ಸು ಉಂಟಾಗಿ ಮುಸುಕಿನ ಗುದ್ದಾಟ ನಡೆದಿತ್ತು ಎಂದು ಹೇಲಾಗಿತ್ತು. ಆದರೆ ಈ ನಿರ್ದೇಶಕರ ಮುಸುಕಿನ ಗುದ್ದಾಟಕ್ಕೆ ಬೇಸತ್ತು ಮಾಜಿ ಸಂಸದ ರಮೇಶ ಕತ್ತಿ ಅವರು ಕೊನೆಗೂ ಶುಕ್ರವಾರ ಬಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕಾಗಿ ಕೆಲ ನಿರ್ದೇಶಕರು ರಮೇಶ ಕತ್ತಿ ವಿರುದ್ಧ ಬಂಡಾಯ ಎದ್ದಿದ್ದರು. ಈ ಹಿನ್ನೆಲೆಯಲ್ಲಿ ರಮೇಶ ಕತ್ತಿ ಅವರು ಶುಕ್ರವಾರ ಕರೆದ ಸಭೆಗೆ ಕೆಲ ನಿರ್ದೇಶಕರು ಗೈರಾಗಿ ಪ್ರತ್ಯೇಕವಾಗಿ ಸಭೆ ನಡೆಸಿ ರಮೇಶ ಕತ್ತಿ ವಿರುದ್ಧ ಅವಿಶ್ವಾಸಕ್ಕೆ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ನಿರ್ದೇಶಕರ ಈ ನೀತಿಯಿಂದ ಬೇಸತ್ತಿದ್ದ ರಮೇಶ ಕತ್ತಿ ಅವರು ಕೊನೆಗೂ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಈ ಎಲ್ಲ ಬೆಳವಣಿಗೆಗೆ ಅನುಗುಣವಾಗಿ ಬಿಡಿಸಿಸಿ ಬ್ಯಾಂಕಿನ ನಿರ್ದೇಶಕರು ಶುಕ್ರವಾರ ಸಂಜೆ ನಗರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಿಂದ ರಮೇಶ ಕತ್ತಿ ಅವರು ದೂರ ಉಳಿದುಕೊಂಡಿರುವದು ಮತ್ತೊಂದು ಅನುಮಾನಕ್ಕೆ ಕಾರಣವಾಗಿದೆ.