ಬಿಇಓ ಎಚ್ ನಾಣಕೀ ನಾಯ್ಕ ಅವರಿಗೆ ರಾಜ್ಯ ಶಿಕ್ಷಣ ಸೇವಾ ರತ್ನ ಪ್ರಶಸ್ತಿ
BEO H Nanaki Naik gets State Education Service Ratna Award
ಲಕ್ಷ್ಮೇಶ್ವರ 31: ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ನಾಣಕೀ ನಾಯ್ಕ ಅವರಿಗೆ ವಿಶ್ವ ವಿಜಯ ಪತ್ರಿಕೆಯ 21ನೇ ವರ್ಷಾಚರಣೆ ಅಂಗವಾಗಿ 2025 -26- ನೇ ಸಾಲಿನ ವಿವಿಧ ರಂಗದಲ್ಲಿ ಸಾಧನೆಗೈದ ಸಾಧಕರಿಗೆ ಕೊಡ ಮಾಡುವ ರಾಜ್ಯ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಶಿರಹಟ್ಟಿ ಲಕ್ಷ್ಮೇಶ್ವರ ತಾಲೂಕಿನ ಎಲ್ಲ ಶಿಕ್ಷಕ ವೃಂದದವರೊಂದಿಗೆ ಒಳ್ಳೆಯ ಪ್ರೀತಿ-ವಿಶ್ವಾಸ ಉತ್ತಮ ಬಾಂಧವ್ಯದೊಂದಿಗೆ ಪ್ರಸ್ತುತ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ರಾಂಕಿಂಗ್ ಪಡೆಯಬೇಕು ಎಂಬ ಉದ್ದೇಶದಿಂದ ಎರಡು ತಾಲೂಕಿನಲ್ಲಿ ಎಲ್ಲ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳೊಂದಿಗೆ ಮತ್ತು ಶಾಲೆಯ ಎಲ್ಲ ಶಿಕ್ಷಕ ವೃಂದದವರೊಂದಿಗೆ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರ ಸದಸ್ಯರೊಂದಿಗೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪಾಲಕರೊಂದಿಗೆ ಗ್ರಾಮಸ್ಥರ ಸಹಕಾರದೊಂದಿಗೆ ಗ್ರಾಮ ವಾಸ್ತವ್ಯ ಓದಿನ ಮನೆ ನಮ್ಮ ನಡೆ ಓದಿನ ಕಡೆ ಸೇರಿದಂತೆ ಹಲವಾರು ವಿಶೇಷ ಕಾರ್ಯಕ್ರಮಗಳೊಂದಿಗೆ ಎರಡು ತಾಲೂಕಿನಲ್ಲಿ ಕಾಲಿಗೆ ಚಕ್ರವನ್ನು ಕಟ್ಟಿಕೊಂಡು ಹಗಲು ರಾತ್ರಿ ಎನ್ನದೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ರಾಂಕಿಂಗ್ ಪಡೆಯಂತಾಗಲಿ ಎಂದು ನಿರಂತರ ಪ್ರಯತ್ನ ಹಾಗೂ ಎರಡು ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಿಗೆ ಆಟದ ಮೈದಾನ ಉತ್ತಮ ಶಿಕ್ಷಣ ವಿದ್ಯಾರ್ಥಿಗಳ ಯೋಗ ಕ್ಷೇಮ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿರುವುದನ್ನು ಗುರುತಿಸಿ ವಿಶ್ವ ವಿಜಯ ಪತ್ರಿಕೆಯವರು ತಮ್ಮ 21ನೇ ವರ್ಷಾಚರಣೆಯ ಅಂಗವಾಗಿ 26.4.2026ರಂದು ಡಾ ಬಿ ಆರ್ ಅಂಬೇಡ್ಕರ ಸಭಾಭವನ ಸಂಗೊಳ್ಳಿ ರಾಯಣ್ಣ ನಗರ ಹುಬ್ಬಳ್ಳಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಪ್ರಧಾನ ಮಾಡುವರು ರಾಜ್ಯ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ನಾಣಕೀ ನಾಯ್ಕ ಅವರಿಗೆ ಲಕ್ಷ್ಮೇಶ್ವರ ಪಟ್ಟಣದ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಪ್ರಧಾನ ಗುರುಗಳಾದ ಬಸವರಾಜ ಕುಂಬಾರ ಅವರು ಹಾಗೂ ಶಿರಹಟ್ಟಿ ಲಕ್ಷ್ಮೇಶ್ವರ ಅವಳಿ ತಾಲೂಕಿನ ಎಲ್ಲ ಶಿಕ್ಷಕರಿಂದದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 