15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಮಾಜಿ ರಾಜ್ಯಾಧ್ಯಕ್ಷ ಹೊಸಳ್ಳಿ
ಲೋಕದರ್ಶನ ವರದಿ
ಕೊಪ್ಪಳ 08: ರಾಜ್ಯದಲ್ಲಿ ಅನಿವಾರ್ಯವಾಗಿ ರಾಜಕೀಯ ಬೆಳವಣಿಗೆ ಹಿನ್ನಲೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮೀಶ್ರ ಸರಕಾರದ ದುರಾಡಳಿತಕ್ಕೆ ಬೇಸತ್ತು ಹಾಗೂ ಸಮ್ಮೀಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾದ ಕೂಡಲೇ ಎಚ್.ಡಿ.ಕುಮಾರಸ್ವಾಮಿಯವರ ಸರ್ವಾಧಿಕಾರಕ್ಕೆ ಮೊದಲು ಕಾಂಗ್ರೆಸ್ನಲ್ಲಿ ಭಿನ್ನಮತ ನಂತರ ಜೆಡಿಎಸ್ನಲ್ಲಿ ಶಾಸಕರ ರಾಜಿನಾಮೆಯಿಂದ ಈಗ ರಾಜ್ಯದಲ್ಲಿ ಉಪ ಚುನಾವಣೆ ಬರಲು ಕಾರಣ ಈಗ ರಾಜ್ಯದ 15ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಮಾಜಿ ರಾಜ್ಯಾಧ್ಯಕ್ಷ ಪೀರಾಹುಸೇನ ಹೊಸಳ್ಳಿ ವಕೀಲರು ತಿಳಿಸಿದ್ದಾರೆ.
ಇಂತಹ ಕಠಿಣ ಪರಿಸ್ಥಿತಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರು ಸಿಎಂ ಆಗಿದ್ದ ಕುಮಾರಸ್ವಾಮಿಯವರ ಕುಟುಂಬದಿಂದ ಬೇಸತ್ತು ಕಾಂಗ್ರೆಸ್ ಪಕ್ಷ ಬೆಂಬಲ ವಾಪಾಸ್ ಪಡೆಯುವಷ್ಟರಲ್ಲಿ ಅನೇಕ ಶಾಸಕರು ರಾಜಿನಾಮೆ ನೀಡಿದ್ದರಿಂದ ರಾಜ್ಯದಲ್ಲಿ ಬಿಜೆಪಿ ಸರಕಾರ ಬರಲು ಕಾರಣವಾಯಿತು.
ನಂತರ ರಾಜ್ಯದ 15 ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ಬಂತು, ಈ ಎಲ್ಲಾ ಕ್ಷೇತ್ರಗಳಲ್ಲಿ ಸರ್ವಸಮ್ಮತದಿಂದ ಅಲ್ಪಸಂಖ್ಯಾತರು ಅಸಕ್ತಿಯಿಂದ ಬಿಜೆಪಿ ಬೆಂಬಲಿಸಿದ್ದರಿಂದ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ತಿಳಿಸಿದ್ದಾರೆ.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 