'ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸಕರ್ಾರವಿದ್ದಾಗ ಸಾಲಮನ್ನಾಗೆ ಅಡ್ಡಿಪಡಿಸಿದ್ದು ಎಚ್ಡಿಕೆ'
ಬೆಂಗಳೂರು 03: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸಕರ್ಾರವಿದ್ದಾಗ ಸಾಲಮನ್ನಾ ಮಾಡಲು ನಿರ್ಧರಿಸಿದ್ದೆ, ಆದರೆ ಅದಕ್ಕೆ ಅಡ್ಡಿಪಡಿಸಿದ್ದು ಎಚ್.ಡಿ.ಕುಮಾರಸ್ವಾಮಿ. ಆದರೆ ಈಗ ನೀವೇನ್ ಮಾಡುತ್ತಿದ್ದೀರಿ? ಒಂದು ವೇಳೆ ಬಜೆಟ್ ನಲ್ಲಿ ರೈತರ ಸಾಲಮನ್ನಾ ಘೋಷಣೆ ಮಾಡದಿದ್ದರೆ ಜುಲೈ 12ರಿಂದ ರಾಜ್ಯಾದ್ಯಂತ ಹೇಳಿದ್ದೇನು, ಮಾಡಿದ್ದೇನು ಘೋಷಣೆಯಡಿ ಪ್ರವಾಸ ಕೈಗೊಳ್ಳುವುದಾಗಿ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ವಿಧಾನಸಭೆಯ ಕಲಾಪದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚಚರ್ೆ ವೇಳೆ ವಿಷಯ ಪ್ರಸ್ತಾಪಿಸಿ ಅವರು ಮಾತನಾಡಿದರು.
ಬಿಜೆಪಿ, ಜೆಡಿಎಸ್ ಸಮ್ಮಿಶ್ರ ಸಕರ್ಾರದಲ್ಲಿ ಹಣಕಾಸು ಸಚಿವನಾಗಿದ್ದಾಗ ಸಾಲಮನ್ನಾ ತೀಮರ್ಾನ ಕೈಗೊಂಡಿದ್ದೆ. ಆದರೆ ಅದಕ್ಕೆ ಬಲವಾಗಿ ಅಡ್ಡಿಪಡಿಸಿದವರು ಕುಮಾರಸ್ವಾಮಿ ಎಂದು ವಾಗ್ದಾಳಿ ನಡೆಸಿದರು.
ಏತನ್ಮಧ್ಯೆ ಮಧ್ಯೆ ಪ್ರವೇಶಿಸಿದ ಸಿಎಂ ಕುಮಾರಸ್ವಾಮಿ ನಾನು ಅದಕ್ಕೆ ಅಡ್ಡಿಪಡಿಸಿಲ್ಲ ಎಂದು ಸಮಜಾಯಿಷಿ ನೀಡಲು ಹೋದಾಗ ನನ್ನಲ್ಲಿ ನೀವು ಅಂದು ಹೇಳಿರುವ ಎಲ್ಲಾ ದಾಖಲೆ ಇದೆ ಎಂದು ತಿರುಗೇಟು ನೀಡಿದರು.
ಕಲಾಪದಲ್ಲಿ ಜೆಡಿಎಸ್ ಪ್ರಣಾಳಿಕೆಯನ್ನು ಓದಿದ ಯಡಿಯೂರಪ್ಪ, 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ತಿಂಗಳಿಗೆ ಆರು ಸಾವಿರ ರೂಪಾಯಿ ಪಿಂಚಣಿ ಕೊಡುವುದಾಗಿ ಹೇಳಿದ್ದೀರಿ..ಏನ್ ಮಾಡ್ತೀರಾ ಹೇಳಿ.ಹೀಗೆ ಹಲವು ಘೋಷಣೆ ಮಾಡಿದ್ದೀರಿ. ಸಿಎಂ ಹೇಳಿದ್ದನ್ನೆಲ್ಲಾ ಮಾಡಿದರೆ ನಾವೇ ಅವರಿಗೆ ಜೈಕಾರ ಹಾಕುತ್ತೇವೆ. ಒಂದು ವೇಳೆ ಬಜೆಟ್ ನಲ್ಲಿ ಘೋಷಿಸದಿದ್ದರೆ ರಾಜ್ಯಾದ್ಯಂತ ಹೇಳಿದ್ದೇನು, ಮಾಡಿದ್ದೇನು ಎಂಬ ಸ್ಲೋಗನ್ ಮೂಲಕ ಪ್ರವಾಸ ಕೈಗೊಳ್ಳುವುದಾಗಿ ಹೇಳಿದರು.
ಆಗ ಮಧ್ಯಪ್ರವೇಶಿಸಿದ ಸ್ಪೀಕರ್ ಈಗಲೇ ಬಜೆಟ್ ಭಾಷಣ ಮಾಡುತ್ತಿದ್ದೀರಾ ಹೇಗೆ ಎಂದು ಪ್ರಶ್ನಿಸಿದಾಗ..ಇದು ಜೆಡಿಎಸ್ ಪ್ರಣಾಳಿಕೆ ಇದರ ಬಗ್ಗೆ ಮಾತನಾಡುತ್ತಿದ್ದೇನೆ ಎಂದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 