'ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸಕರ್ಾರವಿದ್ದಾಗ ಸಾಲಮನ್ನಾಗೆ ಅಡ್ಡಿಪಡಿಸಿದ್ದು ಎಚ್ಡಿಕೆ'
ಬೆಂಗಳೂರು 03: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸಕರ್ಾರವಿದ್ದಾಗ ಸಾಲಮನ್ನಾ ಮಾಡಲು ನಿರ್ಧರಿಸಿದ್ದೆ, ಆದರೆ ಅದಕ್ಕೆ ಅಡ್ಡಿಪಡಿಸಿದ್ದು ಎಚ್.ಡಿ.ಕುಮಾರಸ್ವಾಮಿ. ಆದರೆ ಈಗ ನೀವೇನ್ ಮಾಡುತ್ತಿದ್ದೀರಿ? ಒಂದು ವೇಳೆ ಬಜೆಟ್ ನಲ್ಲಿ ರೈತರ ಸಾಲಮನ್ನಾ ಘೋಷಣೆ ಮಾಡದಿದ್ದರೆ ಜುಲೈ 12ರಿಂದ ರಾಜ್ಯಾದ್ಯಂತ ಹೇಳಿದ್ದೇನು, ಮಾಡಿದ್ದೇನು ಘೋಷಣೆಯಡಿ ಪ್ರವಾಸ ಕೈಗೊಳ್ಳುವುದಾಗಿ ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ವಿಧಾನಸಭೆಯ ಕಲಾಪದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚಚರ್ೆ ವೇಳೆ ವಿಷಯ ಪ್ರಸ್ತಾಪಿಸಿ ಅವರು ಮಾತನಾಡಿದರು.
ಬಿಜೆಪಿ, ಜೆಡಿಎಸ್ ಸಮ್ಮಿಶ್ರ ಸಕರ್ಾರದಲ್ಲಿ ಹಣಕಾಸು ಸಚಿವನಾಗಿದ್ದಾಗ ಸಾಲಮನ್ನಾ ತೀಮರ್ಾನ ಕೈಗೊಂಡಿದ್ದೆ. ಆದರೆ ಅದಕ್ಕೆ ಬಲವಾಗಿ ಅಡ್ಡಿಪಡಿಸಿದವರು ಕುಮಾರಸ್ವಾಮಿ ಎಂದು ವಾಗ್ದಾಳಿ ನಡೆಸಿದರು.
ಏತನ್ಮಧ್ಯೆ ಮಧ್ಯೆ ಪ್ರವೇಶಿಸಿದ ಸಿಎಂ ಕುಮಾರಸ್ವಾಮಿ ನಾನು ಅದಕ್ಕೆ ಅಡ್ಡಿಪಡಿಸಿಲ್ಲ ಎಂದು ಸಮಜಾಯಿಷಿ ನೀಡಲು ಹೋದಾಗ ನನ್ನಲ್ಲಿ ನೀವು ಅಂದು ಹೇಳಿರುವ ಎಲ್ಲಾ ದಾಖಲೆ ಇದೆ ಎಂದು ತಿರುಗೇಟು ನೀಡಿದರು.
ಕಲಾಪದಲ್ಲಿ ಜೆಡಿಎಸ್ ಪ್ರಣಾಳಿಕೆಯನ್ನು ಓದಿದ ಯಡಿಯೂರಪ್ಪ, 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ತಿಂಗಳಿಗೆ ಆರು ಸಾವಿರ ರೂಪಾಯಿ ಪಿಂಚಣಿ ಕೊಡುವುದಾಗಿ ಹೇಳಿದ್ದೀರಿ..ಏನ್ ಮಾಡ್ತೀರಾ ಹೇಳಿ.ಹೀಗೆ ಹಲವು ಘೋಷಣೆ ಮಾಡಿದ್ದೀರಿ. ಸಿಎಂ ಹೇಳಿದ್ದನ್ನೆಲ್ಲಾ ಮಾಡಿದರೆ ನಾವೇ ಅವರಿಗೆ ಜೈಕಾರ ಹಾಕುತ್ತೇವೆ. ಒಂದು ವೇಳೆ ಬಜೆಟ್ ನಲ್ಲಿ ಘೋಷಿಸದಿದ್ದರೆ ರಾಜ್ಯಾದ್ಯಂತ ಹೇಳಿದ್ದೇನು, ಮಾಡಿದ್ದೇನು ಎಂಬ ಸ್ಲೋಗನ್ ಮೂಲಕ ಪ್ರವಾಸ ಕೈಗೊಳ್ಳುವುದಾಗಿ ಹೇಳಿದರು.
ಆಗ ಮಧ್ಯಪ್ರವೇಶಿಸಿದ ಸ್ಪೀಕರ್ ಈಗಲೇ ಬಜೆಟ್ ಭಾಷಣ ಮಾಡುತ್ತಿದ್ದೀರಾ ಹೇಗೆ ಎಂದು ಪ್ರಶ್ನಿಸಿದಾಗ..ಇದು ಜೆಡಿಎಸ್ ಪ್ರಣಾಳಿಕೆ ಇದರ ಬಗ್ಗೆ ಮಾತನಾಡುತ್ತಿದ್ದೇನೆ ಎಂದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 