ರಾಹುಲ್ ಹೇಳಿಕೆಗೆ ಬಿಜೆಪಿ ಖಂಡನೆ: ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ
ನವದೆಹಲಿ, ಫೆ 7, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೀಡಿರುವ ಹೇಳಿಕೆಯನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತೀವ್ರವಾಗಿ ಖಂಡಿಸಿದ ನಂತರ ಲೋಕಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಯಿತು. ಮಧ್ಯಾಹ್ನ 2 ಗಂಟೆಗೆ ಎರಡನೇ ಬಾರಿ ಸದನ ಸಮಾವೇಶಗೊಂಡ ನಂತರ, ಸಂಸದೀಯ ವ್ಯವಹಾರಗಳ ಸಚಿವರು ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಿದರು. ‘ರಾಹುಲ್ ಗಾಂಧಿ ನೀಡಿರುವ ಹೇಳಿಕೆಯನ್ನು ನಾವು ಸಾರ್ವಜನಿಕವಾಗಿ ಖಂಡಿಸುತ್ತೇವೆ. ಈ ಹೇಳಿಕೆಗಳನ್ನು(ದಂಡ-ಕೋಲು) ಯಾರೊಬ್ಬರೂ ಒಪ್ಪುವಂತಹುದ್ದಲ್ಲ ಎಂದು ಜೋಶಿ ಹೇಳಿದರು. ಪ್ರಶ್ನೊತ್ತರ ವೇಳೆಯಲ್ಲಿ ರಾಹುಲ್ ಗಾಂಧಿ ಮಾಡಿರುವ ‘ದಂಡ’ ಹೇಳಿಕೆಯು ಆಡಳಿತ ಪಕ್ಷದ ಸದಸ್ಯರು ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಇದರಿಂದ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು ಮುಂದೂಡಿದರು. ಕಾಂಗ್ರೆಸ್ ಸದಸ್ಯರೊಬ್ಬರು ಸಚಿವ ಹರ್ಷವರ್ಧನ್ ಕೈಯಿಂದ ಕಾಗದಗಳನ್ನು ಕಸಿದುಕೊಳ್ಳಲು ಯತ್ನಿಸಿದ್ದಾರೆ. ಅಲ್ಲದೆ, ಸಚಿವರ ಮೇಲೆ ದಾಳಿ ಮಾಡಲು ಸಹ ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಸ್ಪೀಕರ್ ಅವರೇ ನಿರ್ಧಾರವನ್ನು ತೆಗೆದುಕೊಳ್ಳಬೇಕಿದೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು.
ಸಭಾಧ್ಯಕ್ಷರ ಪೀಠದಲ್ಲಿದ್ದ ಎ ರಾಜಾ ಅವರು ಸದನವನ್ನು ಸೋಮವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಗಿದೆ ಎಂದು ಘೋಷಿಸಿದರು. ಈ ಮೊದಲು ಸದನವನ್ನು ಎರಡು ಬಾರಿ ಮಧ್ಯಾಹ್ನ 1 ಗಂಟೆಗೆ ಹಾಗೂ 2 ಗಂಟೆವರೆಗೆ ಮುಂದೂಡಲಾಗಿತ್ತು. ಪ್ರಶ್ನೋತ್ತರ ವೇಳೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕುರಿತು ಪ್ರಶ್ನೆ ಕೇಳಲು ರಾಹುಲ್ ಗಾಂಧಿ ಎದ್ದು ನಿಂತಾಗ, ಆರೋಗ್ಯ ಸಚಿವ ಡಾ. ಹರ್ಷವರ್ಧನ್, ರಾಹುಲ್ ಗಾಂಧಿ ವಿಲಕ್ಷಣ ಹೇಳಿಕೆಯನ್ನು ಸದನ ಖಂಡಿಸಬೇಕು ಎಂದು ಹೇಳಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 