ದೆಹಲಿಯನ್ನು ಮುನ್ನಡೆಸುವ ಅಭ್ಯರ್ಥಿಯೇ ಬಿಜೆಪಿಯಲ್ಲಿಲ್ಲ: ಮಾಜಿ ಮುಖ್ಯಮಂತ್ರಿ ಆತಿಶಿ
BJP does not have a candidate to lead Delhi: Former Chief Minister Atishi
ನವದೆಹಲಿ 17: ನೂತನ ಮುಖ್ಯಮಂತ್ರಿ ಘೋಷಣೆ ಹಾಗೂ ಹೊಸ ಸರ್ಕಾರ ರಚನೆ ವಿಳಂಬ ಖಂಡಿಸಿ ಎಎಪಿ ನಾಯಕಿ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಆತಿಶಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಆತಿಶಿ, ಚುನಾವಣಾ ಫಲಿತಾಂಶ ಪ್ರಕಟವಾಗಿ 10 ದಿನವಾಗುತ್ತಿದೆ. ಬಿಜೆಪಿಯು ಫೆಬ್ರುವರಿ 9ರಂದೇ ಮುಖ್ಯಮಂತ್ರಿ ಹೆಸರು ಘೋಷಿಸಲಿದ್ದು, ಕ್ಯಾಬಿನೆಟ್ ರಚಿಸಿ, ತಕ್ಷಣವೇ ಅಭಿವೃದ್ಧಿ ಕಾರ್ಯಗಳನ್ನು ಆರಂಭಿಸಲಿದೆ ಎಂದು ಜನರು ಭಾವಿಸಿದ್ದರು. ಆದರೆ, ಅವರ ಬಳಿ ದೆಹಲಿಯನ್ನು ಮುನ್ನಡೆಸುವ ಅಭ್ಯರ್ಥಿಯೇ ಇಲ್ಲ ಎಂಬುದು ಇದೀಗ ಸ್ಪಷ್ಟವಾಗಿದೆ' ಎಂದು ಟೀಕಿಸಿದ್ದಾರೆ.
ದೆಹಲಿ ಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದಿರುವ ಯಾರ ಮೇಲೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಂಬಿಕೆ ಇಲ್ಲ ಎಂದಿರುವ ಎಎಪಿ ನಾಯಕಿ, ಕೇಸರಿ ಪಕ್ಷವು ದೂರದೃಷ್ಟಿ ಹೊಂದಿಲ್ಲ ಎಂದು ದೂರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 