ದೆಹಲಿ ಮುಖ್ಯಮಂತ್ರಿಯಾಗಬಲ್ಲ ಅರ್ಹ ವ್ಯಕ್ತಿ ಬಿಜೆಪಿಯಲ್ಲಿ ಯಾರೂ ಇಲ್ಲ: ಕೇಜ್ರಿವಾಲ್
ನವದೆಹಲಿ, ಫೆ 06 ,ಬಿಜೆಪಿಯಲ್ಲಿ ದೆಹಲಿ ಮುಖ್ಯಮಂತ್ರಿಯಾಗಲು ಸಮರ್ಥ ವ್ಯಕ್ತಿಗಳೇ ಇಲ್ಲ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ವ್ಯಂಗ್ಯವಾಡಿದ್ದಾರೆ ಗುರುವಾರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ವಿಧಾನಸಭಾ ಚುನಾವಣೆಯ ಪ್ರಚಾರವು ಕೆಲವು ಗಂಟೆಗಳ ನಂತರ ಕೊನೆಗೊಳ್ಳುತ್ತದೆ. ಆದಾಗ್ಯೂ, ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಇನ್ನೂ ಬಹಿರಂಗಪಡಿಸಿಲ್ಲ. ಬಿಜೆಪಿಯಲ್ಲಿ ಯಾರೂ ದೆಹಲಿಯ ಸಿಎಂ ಆಗಲು ಅರ್ಹರಲ್ಲ ಎಂಬುದು ಈಗ ಸ್ಪಷ್ಟವಾಗಿದೆ ಎಂದರು. '' ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 'ನನಗೆ ಮತ ನೀಡಿ ಮತ್ತು ನಾನು ಸಿಎಂ ಅನ್ನು ನಿರ್ಧರಿಸುತ್ತೇನೆ' ಎಂದು ಹೇಳುತ್ತಿದ್ದಾರೆ, ಈ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕಿದ್ದಲ್ಲಿ ಜನರಿಗಾಗಿ ಕೆಲಸ ಮಾಡಿರಬೇಕಾಗುತ್ತದೆ. ಅವರಿಗಾಗಿ ಶಾಲೆಗಳು ಮತ್ತು ಆಸ್ಪತ್ರೆಗಳನ್ನು ನಿರ್ಮಿಸಬೇಕಾಗುತ್ತದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿದರು. "ಇದು 21 ನೇ ಶತಮಾನದ ಭಾರತ, ಈಗ ಅದು ಕೆಲಸದ ಮೇಲೆ ಮತ ಚಲಾವಣೆಯಾಗುತ್ತದೆಯೇ ಹೊರತು, ಜಾತಿ ಮತ್ತು ಧರ್ಮದ ಮೇಲೆ ಅಲ್ಲ" ಎಂದು ಅವರು ಹೇಳಿದರು.ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಚುನಾವಣೆಯಲ್ಲಿ ಪ್ರಮುಖ ವಿಷಯವಾಗಿದೆ. ಪ್ರಚಾರದ ಕೊನೆಯ ದಿನದಂದು ಹಲವಾರು ರ್ಯಾಲಿಗಳು ಸಾಲುಗಟ್ಟಿ ನಿಂತಿವೆ. ಫೆಬ್ರವರಿ 8 ರಂದು 70 ಸ್ಥಾನಗಳಿಗೆ ಮತದಾನ ನಡೆಯಲಿದೆ. ಫೆಬ್ರವರಿ 11 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 