ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಬಾವುಟ ಹಾರಿಸುವುದು ಶತಸಿದ್ಧ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬು
BJP is certain to fly the flag in the next elections: Former MLA T.H. Sureshbabu
ಕಂಪ್ಲಿ:ಡಿ.28. ಪಟ್ಟಣದ ಕೊಟ್ಟಾಲ್ ರಸ್ತೆಯ ವೆಂಕಟೇಶ ಟಾಕೀಸ್ ಎದುರುಗಡೆಯ ಕಲ್ಗುಡಿ ಸಂಕೀರ್ಣದ ಕೆಳಗಡೆಯ ಮಳಿಗೆಯಲ್ಲಿ ನೂತನ ವೃದ್ಧಿ ಕ್ರಿಯೇಷನ್ಸ್ ಫೋಟೋಗ್ರಾಫಿ ಅಂಗಡಿಯನ್ನು ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಭಾನುವಾರ ಅದ್ಧೂರಿಯಾಗಿ ಉದ್ಘಾಟಿಸುವ ಮೂಲಕ ಶುಭ ಹಾರೈಯಿಸಿದರು. ನಂತರ ಸುರೇಶಬಾಬು ಮಾತನಾಡಿ, ಇತ್ತೀಚಿನ ದಿನಮಾನದಲ್ಲಿ ಮದುವೆ, ಜನ್ಮದಿನ, ನಾಮಕರಣ ಸೇರಿದಂತೆ ಇನ್ನಿತರ ಕಾರ್ಯಗಳಲ್ಲಿ ಫೋಟೋಗ್ರಾಫಿಯ ಅವಶ್ಯಕತೆ ಇದೆ. ಆದ್ದರಿಂದ ಇಲ್ಲಿನ ಕೊಟ್ಟಾಲ್ ರಸ್ತೆಯಲ್ಲಿ ಮುಖಂಡ ಗೊಂದಿ ಶಿವುಕುಮಾರ ಅವರ ನೇತೃತ್ವದಲ್ಲಿ ನೂತನ ವೃದ್ಧಿ ಕ್ರಿಯೇಷನ್ಸ್ ಫೋಟೋಗ್ರಾಫಿ ಶಾಪ್ ಅನಾವರಣಗೊಂಡಿರುವುದು ಸಂತದದ ವಿಷಯವಾಗಿದೆ.
ಆಧುನಿಕ ಭಾರತದ ಡಿಜಿಟಲ್ ಯುಗದಲ್ಲಿ ಫೋಟೋಗ್ರಾಫಿಗೆ ಹೆಚ್ಚಿನ ಮಹತ್ವವಿದೆ. ಆದ್ದರಿಂದ ಜನರು ಇಂದು ಫೋಟೋಗ್ರಾಫಿ ಬಳಕೆ ಮಾಡಿಕೊಳ್ಳಬೇಕು ಎಂದು ಹೇಳುವ ಜೊತೆಗೆ ಮುಂದಿನ ದಿನದಲ್ಲಿ ಸ್ಥಳೀಯ ಪುರಸಭೆ, ಗ್ರಾಪಂ ಸೇರಿದಂತೆ ಇನ್ನಿತರ ಚುನಾವಣೆಗಳು ಬರಲಿದ್ದು, ಬಿಜೆಪಿಯೂ ಪ್ರತಿಯೊಂದು ಚುನಾವಣೆ ಎದುರಿಸಲು ಸಕಲ ಸಜ್ಜಾಗಿದೆ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಟಿಕೆಟ್ ನೀಡಲಾಗುವುದು. ಮತ್ತು ಬರುವ ಚುನಾವಣೆಗಳಲ್ಲಿ ಬಿಜೆಪಿ ತಕ್ಕ ಹಿಡಿತಕ್ಕೆ ತೆಗೆದುಕೊಳ್ಳುವುದು ಶತಸಿದ್ಧ ಎಂದರು. ಈ ಸಂದರ್ಭದಲ್ಲಿ ಆಹಾರ ಶಿರಸ್ತೇದಾರ ರವಿಕುಮಾರ ರಾಥೋಡ್, ಮುಖಂಡರಾದ ಗೊಂದಿ ಶಿವುಕುಮಾರ, ಚೇತನ್ಕುಮಾರ, ಗೊಂದಿ ಸಂತೋಷ್, ಎಂ.ವಿಶ್ವನಾಥ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 