ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಬಾವುಟ ಹಾರಿಸುವುದು ಶತಸಿದ್ಧ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬು
BJP is certain to fly the flag in the next elections: Former MLA T.H. Sureshbabu
ಕಂಪ್ಲಿ:ಡಿ.28. ಪಟ್ಟಣದ ಕೊಟ್ಟಾಲ್ ರಸ್ತೆಯ ವೆಂಕಟೇಶ ಟಾಕೀಸ್ ಎದುರುಗಡೆಯ ಕಲ್ಗುಡಿ ಸಂಕೀರ್ಣದ ಕೆಳಗಡೆಯ ಮಳಿಗೆಯಲ್ಲಿ ನೂತನ ವೃದ್ಧಿ ಕ್ರಿಯೇಷನ್ಸ್ ಫೋಟೋಗ್ರಾಫಿ ಅಂಗಡಿಯನ್ನು ಮಾಜಿ ಶಾಸಕ ಟಿ.ಎಚ್.ಸುರೇಶಬಾಬು ಭಾನುವಾರ ಅದ್ಧೂರಿಯಾಗಿ ಉದ್ಘಾಟಿಸುವ ಮೂಲಕ ಶುಭ ಹಾರೈಯಿಸಿದರು. ನಂತರ ಸುರೇಶಬಾಬು ಮಾತನಾಡಿ, ಇತ್ತೀಚಿನ ದಿನಮಾನದಲ್ಲಿ ಮದುವೆ, ಜನ್ಮದಿನ, ನಾಮಕರಣ ಸೇರಿದಂತೆ ಇನ್ನಿತರ ಕಾರ್ಯಗಳಲ್ಲಿ ಫೋಟೋಗ್ರಾಫಿಯ ಅವಶ್ಯಕತೆ ಇದೆ. ಆದ್ದರಿಂದ ಇಲ್ಲಿನ ಕೊಟ್ಟಾಲ್ ರಸ್ತೆಯಲ್ಲಿ ಮುಖಂಡ ಗೊಂದಿ ಶಿವುಕುಮಾರ ಅವರ ನೇತೃತ್ವದಲ್ಲಿ ನೂತನ ವೃದ್ಧಿ ಕ್ರಿಯೇಷನ್ಸ್ ಫೋಟೋಗ್ರಾಫಿ ಶಾಪ್ ಅನಾವರಣಗೊಂಡಿರುವುದು ಸಂತದದ ವಿಷಯವಾಗಿದೆ.
ಆಧುನಿಕ ಭಾರತದ ಡಿಜಿಟಲ್ ಯುಗದಲ್ಲಿ ಫೋಟೋಗ್ರಾಫಿಗೆ ಹೆಚ್ಚಿನ ಮಹತ್ವವಿದೆ. ಆದ್ದರಿಂದ ಜನರು ಇಂದು ಫೋಟೋಗ್ರಾಫಿ ಬಳಕೆ ಮಾಡಿಕೊಳ್ಳಬೇಕು ಎಂದು ಹೇಳುವ ಜೊತೆಗೆ ಮುಂದಿನ ದಿನದಲ್ಲಿ ಸ್ಥಳೀಯ ಪುರಸಭೆ, ಗ್ರಾಪಂ ಸೇರಿದಂತೆ ಇನ್ನಿತರ ಚುನಾವಣೆಗಳು ಬರಲಿದ್ದು, ಬಿಜೆಪಿಯೂ ಪ್ರತಿಯೊಂದು ಚುನಾವಣೆ ಎದುರಿಸಲು ಸಕಲ ಸಜ್ಜಾಗಿದೆ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಟಿಕೆಟ್ ನೀಡಲಾಗುವುದು. ಮತ್ತು ಬರುವ ಚುನಾವಣೆಗಳಲ್ಲಿ ಬಿಜೆಪಿ ತಕ್ಕ ಹಿಡಿತಕ್ಕೆ ತೆಗೆದುಕೊಳ್ಳುವುದು ಶತಸಿದ್ಧ ಎಂದರು. ಈ ಸಂದರ್ಭದಲ್ಲಿ ಆಹಾರ ಶಿರಸ್ತೇದಾರ ರವಿಕುಮಾರ ರಾಥೋಡ್, ಮುಖಂಡರಾದ ಗೊಂದಿ ಶಿವುಕುಮಾರ, ಚೇತನ್ಕುಮಾರ, ಗೊಂದಿ ಸಂತೋಷ್, ಎಂ.ವಿಶ್ವನಾಥ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಇತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 