ಬಿಜೆಪಿ ಸಂಸ್ಥಾಪನಾ ದಿನಕ್ಕಾಗಿ ಬಿಜೆಪಿ ದೇಶದ ಜನತೆಯ ಕೈಯಲ್ಲಿ ದೀಪ ಬೆಳಗಿಸುತ್ತಿದೆ: ಕುಮಾರಸ್ವಾಮಿ
ಬೆಂಗಳೂರು,
ಏ 5, ಜಗತ್ತು ಕೊರೋನಾ ಮಹಾಮಾರಿಯಿಂದ ತತ್ತರಿಸುವ ಸಂದರ್ಭದಲ್ಲಿ ಇಂತಹ
ರಹಸ್ಯ ಕಾರ್ಯಸೂಚಿ ಅರ್ಥಾತ್ ಪರದೆ ಹಿಂದಿನ ಸತ್ಯ ಮರೆಮಾಚಿ ಅಕಾಲಿಕ ದೀಪಾವಳಿ
ಮಾಡಬೇಕೆ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಧಾನಿ ಕರೆ ನೀಡಿರುವ
ಜ್ಯೋತಿ ಬೆಳಗುವಿಕೆಯನ್ನು ಪ್ರಶ್ನಿಸಿದ್ದಾರೆ. ಏ. 6 ಬಿಜೆಪಿಯ ಸಂಸ್ಥಾಪನಾ
ದಿನವಾಗಿದ್ದು, ಪಕ್ಷದ ಸಂಸ್ಥಾಪನಾ ದಿನ ಆಚರಿಸಲು ಕೊರೋನ ಸಂಕಷ್ಟವನ್ನು ಪ್ರಧಾನಿ
ದುರುಪಯೋಗ ಮಾಡಿಕೊಂಡರೇ? ಎಂದು ಅವರು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.ದೇಶದ
ಸಂಕಟವನ್ನು ಬಗೆಹರಿಸುವ ಯಾವುದೇ ಮಾರ್ಗೋಪಾಯಗಳನ್ನು ದೇಶಕ್ಕೆ ಹೇಳದೇ ಪ್ರಧಾನಿ
ಏಪ್ರಿಲ್ 5ನ್ನೇ ಆಯ್ದುಕೊಂಡದ್ದಕ್ಕೆ ಯಾವ ವೈಜ್ಞಾನಿಕ, ವೈಚಾರಿಕ ಕಾರಣ ಇದೆ
ಎಂಬುದನ್ನು ಸ್ಪಷ್ಟ ಪಡಿಸಬೇಕು. ದೇಶ ಹಿಂದೆಂದೂ ಕಂಡರಿಯದ ಕಷ್ಟದ ದಿನಗಳಲ್ಲಿ ಇರುವಾಗ
ದೀಪ ಬೆಳಗಿಸಿ ಒಗ್ಗಟ್ಟು ಪ್ರದರ್ಶಿಸುವ ನೆಪದಲ್ಲಿ ಈ ತರದ ತೋರಿಕೆಯ ಸಂಭ್ರಮ ಬೇಕೇ?
ಎಂದು ಕುಮಾರಸ್ವಾಮಿ ಬಿಜೆಪಿಯನ್ನು ಕುಟುಕಿದ್ದಾರೆ.ಬಿಜೆಪಿ ಸಂಸ್ಥಾಪನಾ ದಿನದ
ಸಂಭ್ರಮೋತ್ಸವವನ್ನು ಕೊರೋನ ಸಂಕಷ್ಟದ ದಿನಗಳಲ್ಲಿ ನೇರಾನೇರ ಆಚರಿಸಲು ಹಿಂಜರಿದ ಬಿಜೆಪಿ
ಪರೋಕ್ಷವಾಗಿ ಇಡೀ ದೇಶದ ಜನತೆಯ ಕೈಯಲ್ಲಿ ದೀಪ ಬೆಳಗಿಸಿ ತನ್ನ ಭಂಡತನವನ್ನು
ಮೆರೆಯುತ್ತಿದೆಯೇ ಎಂದು ಟ್ವೀಟ್ ಮೂಲಕ ಸೂಚ್ಯವಾಗಿ ತಿವಿದಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 