ಪೌರಕಾರ್ಮಿಕರ ಅನಿರ್ದಿಷ್ಟಾವದಿ ಮುಷ್ಕರಕ್ಕೆ: ಬಿಜೆಪಿ ಮುಖಂಡ ವಿರೂಪಾಕ್ಷ ಮಾಮನಿ ಬೆಂಬಲ
BJP leader Virupaksha Mamani supports indefinite strike of civil servants
ಸವದತ್ತಿ 29: ಯಲ್ಲಮ್ಮ ಪುರಸಭೆ ಪೌರ ಕಾರ್ಮಿಕರು ಎರಡನೇ ದಿನದ ಅನಿರ್ಧಿಷ್ಟಾವಧಿ ಪ್ರತಿಭಟನೆ ಬಿಜೆಪಿ ಮಂಡಳ ಅಧ್ಯಕ್ಷರು ವಿರೂಪಾಕ್ಷ ಮಾಮನಿ ಬೆಂಬಲ ವ್ಯಕ್ತಪಡಿಸಿದರು.
ಈ ವೇಳೆ ಕಸ ವಿಲೇವಾರಿ, ವಾಹನ ಚಾಲಕರು, ಒಳ ಚರಂಡಿ ನಿರ್ವಹಣೆ ಹಾಗೂ ಕಛೇರಿ ಕಾರ್ಯಗಳು ಸ್ಥಗಿತದಿಂದ ಪೌರ ಕಾರ್ಮಿಕರು ಆರಂಭಿಸಿರುವ "ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿ, ಅವರ ಬೇಡಿಕೆಗಳನ್ನು ಆಲಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಲಾಯಿತು.ವಿರೂಪಾಕ್ಷ ಮಾಮನಿ ಮಾತನಾಡಿ ಕಳೆದ 2 ದಿನಗಳಿಂದ ರಾಜ್ಯದ ಬಹುತೇಕ ಪೌರ ಕಾರ್ಮಿಕರ ಆಡಳಿತ ಸ್ತಬ್ಧವಾಗಿದ್ದು ನೀರು ಪೂರೈಕೆ, ತ್ಯಾಜ್ಯ ವಿಲೇವಾರಿ, ದಾಖಲೆಗಳ ವಿತರಣೆ ಈ ರೀತಿ ದಿನ ನಿತ್ಯದ ಕೆಲಸ ಕಾರ್ಯಗಳು ನಿಂತುಹೋಗಿ ಸಾರ್ವಜನಿಕರು ಕಷ್ಟಪಡುವಂತಾಗಿದೆ ಸರಕಾರ ಕೂಡಲೇ ಪೌರಕಾರ್ಮಿಕರು ಕಷ್ಟಗಳಿಗೆ ಸ್ಪಂದಿಸುವ ಅವರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರು ಅರ್ಜುನ ಅಮೋಜಿ, ವಿರೇಶ ಪ್ರಭುನವರ ಹಾಗೂ ಪ್ರಮುಖರು ಪ್ರಮೋದ ಕಾರದಗಿ, ಮಲ್ಲಿಕಾರ್ಜುನ ಬೀಳಗಿ, ಸುನೀಲ ಮಾಮನಿ ಹಾಗೂ ಪೌರ ಕಾರ್ಮಿಕರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 