ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ದ ಇಂದು ಬಿಜೆಪಿ ಪ್ರತಿಭಟನೆ
ಕೊಪ್ಪಳ 01: ರಾಜ್ಯದಲ್ಲಿ ವಿವಿಧ ಅಗತ್ಯ ಸೇವೆಗಳು, ಪದಾರ್ಥಗಳ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪಕ್ಷದಿಂದ ಏಪ್ರಿಲ್ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜ ದಡೇಸೂಗೂರು ಹೇಳಿದರು.
ಅವರು ಮಂಗಳವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ, ಉದ್ದೇಶಿಸಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅವೈಜ್ಞಾನಿಕವಾಗಿ ಬೆಲೆಗಳನ್ನು ಏರಿಸುತ್ತಲೇ ಹೊರಟಿದೆ. ಎರಡೆರಡು ಬಾರಿ ವಿದ್ಯುತ್ ದರ ಹೆಚ್ಚಿಸಿದ್ದರೆ, ಹಾಲಿನ ಬೆಲೆ ಯನ್ನು ಒಂದೇ ಬಾರಿಗೆ 4 ರೂ ಹೆಚ್ಚಿಸಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದೆ, ಹಾಲಿನ ಬೆಲೆ ಏರಿಕೆ ಮಾಡಿ ರೈತರಿಗೆ ಪ್ರೋ ತ್ಸಾಹ ಧನವೂ ನೀಡದೇ ವಂಚಿಸಿದೆ,ಮುದ್ರಾಂಕ ಶುಲ್ಕವನ್ನು ಮನಸೋಯಿಚ್ಛೆ ಏರಿಸಲಾಗಿದೆ. ವೃತ್ತಿ ತೆರಿಗೆ,ವಾಹನ ನೊಂದಣಿ ಶುಲ್ಕ, ಶಾಲಾ ಕಾಲೇಜುಗಳ ಶುಲ್ಕ ವಿದ್ಯುತ್ ಚಾಲಿತ ವಾಹನಗಳ ಮೇಲಿನ ತೆರಿಗೆ,ಬಸ್ ದರ, ಬೀಜ, ಮದ್ಯ, ವಿದ್ಯುತ್ ಶುಲ್ಕ, ಆಸ್ಪತ್ರೆ ಶುಲ್ಕಗಳ ನ್ನು ಸಹ ಹೆಚ್ಚಿಸಿದೆ. ಜನರು ವಿಶ್ವಾಸವಿಟ್ಟು ಅಧಿಕಾರ ನೀಡಿದ್ದನು ದುರುಪಯೋಗಪಡಿಸಿಕೊಳ್ಳುತ್ತಿದೆ,
ಗ್ಯಾರೆಂಟಿ ಯೋಜನೆಗಳನ್ನು ನೀಡಿ ಯಾವುದೇ ದರ ಹೆಚ್ಚಿಸುವುದಿಲ್ಲ ಎಂದು ಹೇಳಿ ಈಗ ಪದೇ ಪದೇ ದರ ಹೆಚ್ಚಿಸುತ್ತಿರುವುದು ಸರಿಯಲ್ಲ ಇದನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನ ಧರಣಿಯಲ್ಲಿ ಕೊಪ್ಪಳ ಜಿಲ್ಲೆಯಿಂದ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು, ಹೆಚ್ಚಿನಸಂಖ್ಯೆಯಲ್ಲಿ ಪಾಲ್ಗೊಳ್ಳುವರು ಎಂದರು.ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ,ಡಾ.ಬಸವರಾಜ್ ಕ್ಯಾವಟರ್, ನಾಗರಾಜ್ ಬಿಲ್ಗಾರ್, ಶಿವು ಅರಕೇರಿ ಮಹೇಶ್ ಹಾದಿಮನಿ ಉಪಸ್ಥಿತರಿದ್ದರು.