ರಾಹುಲ್ ಗಾಂಧಿ ವಿರುದ್ಧ ಶನಿವಾರ ದೇಶಾದ್ಯಂತ ಬಿಜೆಪಿ ಪ್ರತಿಭಟನೆ
ನವದೆಹಲಿ, ನ, 15 : ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ದ ರಫೇಲ್ ಯುದ್ಧ ವಿಮಾನಗಳ ಖರೀದಿ ಒಪ್ಪಂದದಲ್ಲಿ ಸುಳ್ಳು ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಶನಿವಾರ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಭಾರತೀಯ ಜನತಾ ಪಕ್ಷ ತಿಳಿಸಿದೆ.
ರಫೇಲ್ ವಿಚಾರದಲ್ಲಿ ದೇಶದ ಜನರ ದಿಕ್ಕುತಪ್ಪಿಸಲು ಯತ್ನಿಸಿದ್ದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ನಾಳೆ ದೆಹಲಿಯ ಕಾಂಗ್ರೆಸ್ ಪಕ್ಷದ ಕಚೇರಿಯ ಮುಂಭಾಗದಲ್ಲಿ, ದೇಶದ ವಿವಿಧೆಡೆ ಬಿಜೆಪಿ ಪ್ರತಿಭಟನೆ ನಡೆಸಲಿದೆ.
ಕಳೆದ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಇದನ್ನು ಬಿಜೆಪಿ ವಿರುದ್ಧ ಅಸ್ತ್ರವಾಗಿಸಿಕೊಳ್ಳಲು ಪ್ರಯತ್ನಿಸಿತ್ತು,ಈ ಒಪ್ಪಂದದಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಹೊಸ ತನಿಖೆ ಬೇಕಿಲ್ಲ ಎಂದು ಸುಪ್ರೀಂಕೋರ್ಟ್ ಗುರುವಾರ ಮತ್ತೊಮ್ಮೆ ಕ್ಲೀನ್ ಚಿಟ್ ನೀಡಿ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿತ್ತು.
ಅಲ್ಲದೇ ಕಾವಲುಗಾರನೇ ಕಳ್ಳ ಎಂದು ಸುಪ್ರೀಂಕೋರ್ಟ್ ಹೆಸರು ಬಳಸಿ ಮೋದಿ ವಿರುದ್ಧ ಆರೋಪ ಮಾಡಿದ್ದ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಇನ್ನು ಮುಂದೆ ಬಹಿರಂಗ ಹೇಳಿಕೆ ನೀಡುವಾಗ ಎಚ್ಚರ, ಜಾಗ್ರತೆ ವಹಿಸಬೇಕು ಎಂದೂ ತಾಕೀತು ಮಾಡಿತ್ತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 