ಸೆ.1ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಯಾತ್ರೆ

ಸೆ.1ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಯಾತ್ರೆ  BJP to hold Dharmasthala Chalo Yatra on September 1

ದೇವರಹಿಪ್ಪರಗಿ 30:  ಹಿಂದುಗಳ ಪವಿತ್ರ ಯಾತ್ರಾ ಸ್ಥಳವಾದ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ವಿರೋಧಿಸಿ ಸೆ.1ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಯಾತ್ರೆ ನಡೆಸಲಾಗುತ್ತಿದೆ ದೇವರಹಿಪ್ಪರಗಿ ಕ್ಷೇತ್ರದಿಂದ ಸುಮಾರು 20ಕ್ಕೂ ಹೆಚ್ಚು ವಾಹನಗಳಲ್ಲಿ, ಸಹಸ್ರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   

ಧರ್ಮದ ಉಳಿವಿಗಾಗಿ ಸೆಪ್ಟೆಂಬರ್ 1ರಂದು ಧರ್ಮಸ್ಥಳ ಚಲೋ ನಡೆಸಿ ಬೃಹತ್ ಸಮಾವೇಶ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಿರ್ಧರಿಸಿದೆ. ಸರ್ಕಾರದಿಂದ ಭಕ್ತರ ಭಾವನೆಗಳಿಗೆ ಧಕ್ಕೆಯಾಗಿದೆ. ಧರ್ಮಸ್ಥಳದ ಸುತ್ತಮುತ್ತಲಿನ ಅಸಹಜ ಸಾವಿನ ಪ್ರಕರಣಗಳ ತನಿಖೆಯನ್ನು ಎಸ್‌ಐಟಿ ಬದಲಿಗೆ ಎನ್‌ಐಎಗೆ ವಹಿಸಿ ಎಂದು ಆಗ್ರಹಿಸಲು ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು, ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.