ಇಂಡಿಯಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ
BJP workers celebrate victory in Indi
ಇಂಡಿ 14: ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಎನ್ಡಿಎ ಪ್ರಚಂಡ ಬಹುಮತ ಪಡಿಯುತ್ತಿದಂತೆ ಇಂಡಿ ನಗರದ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತದ ಬಳಿ ಬಿಜೆಪಿ ಹಾಗೂ ಜೆಡಿಎಸ್ ಸಾವಿರಾರು ಕಾರ್ಯಕರ್ತರು ಸೇರಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ವಿಜಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಬಿಜೆಪಿ ಮುಖಂಡರಾದ ಕಾಸುಗೌಡ ಬಿರಾದಾರ ಅವರು ಮಾತನಾಡಿ ದೇಶದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ರೈತ ಪರ ಜನ ಪರ. ಜನಸಾಮಾನ್ಯರಿಗೆ ಒಳ್ಳೆಯ ಆಡಳಿತ ನೀಡುತ್ತೀದೆ. ಭಾರತೀಯ ಜನತಾ ಪಕ್ಷದ ಮೇಲೆ ಭರವಸೆ ಇಟ್ಟು ಹಾಗೂ ಹತ್ತು ವರ್ಷಗಳ ಕಾಲ ಬಿಹಾರದಲ್ಲಿ ಉತ್ತಮ ಆಡಳಿತ ನೀಡಿದ ಎನ್ ಡಿ ಎ ನೇತೃತ್ವದಲ್ಲಿ ಸರ್ಕಾರದ ಮೇಲೆ ಭರವಸೆ ಇಟ್ಟು ಜನರು ಮತ್ತೆ ಬಿಜೆಪಿ ಹಾಗೂ ಜೆಡಿಯು ನೇತೃತ್ವದ ಪಕ್ಷಕ್ಕೆ ಬೆಂಬಲ ನೀಡಿದ್ದರಿಂದ ಮತ್ತೆ ಬಿಹಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನೇತೃತ್ವದಲ್ಲಿ ಸರ್ಕಾರ ಅಧಿಕಾರ ನಡಿಸಲಿದೆ ಹಾಗೂ ಮುಂಬರುವ ದಿನಗಳಲ್ಲಿ ಕೂಡಾ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವುದು ಶತ ಸಿದ್ಧ ಎಂದು ಹೇಳಿದರು.
ಈ ನಡುವೆ ಬಿಹಾರದ ಸಂಪೂರ್ಣ ಫಲಿತಾಂಶ ಹೊರ ಬೀಳುವ ಮುನ್ನವೇ ಕಾಂಗ್ರೆಸ್ ನಾಯಕರು ಮತಗಳ್ಳತನದ ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಬಿಹಾರದಲ್ಲಿ ಮತಗಳ್ಳತನವಾಗಿದೆ ಎಂದು ಆರೋಪ ಮಾಡಿದ್ದು ಇಲ್ಲಿ ಸ್ಮರಿಸಬಹುದಾಗಿದೆ.
ಈ ವಿಜಯೋತ್ಸವದಲ್ಲಿ ಬಿಜೆಪಿ ತಾಲೂಕು ಘಟಕದ ಅಧ್ಯಕ್ಷರಾದ ಹಣಮಂತರಾಯಗೌಡ ಪಾಟೀಲ, ಬಿಜೆಪಿ ಮುಖಂಡರಾದ ಶೀಲವಂತ ಉಮರಾಣಿ ಅನೀಲ ಜಮಾದಾರ ಅನೀಲಗೌಡ ಬಿರಾದಾರ ರಾಮಸಿಂಗ್ ಕನ್ನೊಳ್ಳಿ ಶರಣಗೌಡ ಬಂಡಿ ಮಲ್ಲಿಕಾರ್ಜುನ ಕಿವಡೆ ಬಾಳು ಮುಳಜಿ ರವಿ ವಗ್ಗೆ ರಾಜು ಯರಗಲ್ಲ ಭೀಮನಗೌಡ ಪಾಟೀಲ ಸಂಜು ದಶವಂತ ಅದೃಷಪ್ಪ ವಾಲಿ ಶ್ರೀಧರ ಕ್ಷೇತ್ರಿ ಸೇರಿದಂತೆ ನೂರಾರು ಯುವಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 