ಬಾಂಗ್ಲಾದೇಶದ ನುಸುಳುಕೋರರು ಭಾರತ ಪ್ರವೇಶಿಸಲು ಬಿಎಸ್ಎಫ್ ಅವಕಾಶ ನೀಡಿದೆ: ಮಮತಾ ಬ್ಯಾನರ್ಜಿ
BSF allowed Bangladeshi infiltrators to enter India: Mamata Banerjee
ಕೋಲ್ಕತ್ತಾ 02: ಬಾಂಗ್ಲಾದೇಶದ ನುಸುಳುಕೋರರು ಭಾರತ ಪ್ರವೇಶಿಸಲು ಬಿಎಸ್ಎಫ್ ಅವಕಾಶ ನೀಡಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ.
ಪಶ್ಚಿಮ ಬಂಗಾಳವನ್ನು ಅಸ್ಥಿರಗೊಳಿಸಲು ಬಿಎಸ್ಎಫ್ ಪ್ರಯತ್ನಿಸುತ್ತಿದೆ. ಬಿಎಸ್ಎಫ್ನ ಈ ವರ್ತನೆಯ ಹಿಂದೆ ಕೇಂದ್ರ ಸರ್ಕಾರದ ನೀಲನಕ್ಷೆಯನ್ನು ನಾನು ಗ್ರಹಿಸಬಲ್ಲೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ನುಸುಳುಕೋರರು ಇಸ್ಲಾಂಪುರ, ಸೀತಾಯ್, ಚೋಪ್ರಾ ಮತ್ತು ಇತರ ಹಲವಾರು ಗಡಿ ಪ್ರದೇಶಗಳ ಮೂಲಕ ಭಾರತಕ್ಕೆ ಪ್ರವೇಶಿಸಲು ಬಿಎಸ್ಎಫ್ ಅವಕಾಶ ನೀಡುತ್ತಿದೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ಬಿಎಸ್ಎಫ್ ಸಹ ಜನರನ್ನು ಹಿಂಸಿಸುತ್ತಿದೆ ಮತ್ತು ರಾಜ್ಯವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ರಾಜ್ಯ ಸಚಿವಾಲಯದಲ್ಲಿ ನಡೆದ ಆಡಳಿತಾತ್ಮಕ ಪರಿಶೀಲನಾ ಸಭೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ನುಸುಳುಕೋರರು ಎಲ್ಲೆಲ್ಲಿ ತಂಗಿದ್ದಾರೆ ಎಂಬುದನ್ನು ಪತ್ತೆ ಮಾಡುವಂತೆ ಡಿಜಿಪಿ ರಾಜೀವ್ ಕುಮಾರ್ ಅವರಿಗೆ ಸೂಚಿಸಿದ ಮಮತಾ, ಈ ಕುರಿತು ಕೇಂದ್ರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 