ಅಂತಾರಾಷ್ಟ್ರೀಯ ದಾದಿಯರ ದಿನದ ಶುಭ ಕೋರಿದ ಬಿಎಸ್ ವೈ, ಶ್ರೀರಾಮುಲು
ಬೆಂಗಳೂರು, ಮೇ12, ಫ್ಲಾರೆನ್ಸ್ ನೈಟಿಂಗೇಲ್ ಜನ್ಮದಿನದ ಪ್ರಯುಕ್ತ ಆಚರಿಸಲಾಗುವ ಅಂತಾರಾಷ್ಟ್ರೀಯ ದಾದಿಯರ ದಿನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ದಾದಿಯರಿಗೆ ಶುಭ ಕೋರಿದ್ದಾರೆ.ಅತ್ಯಂತ ಸೂಕ್ಷ್ಮ ಮತ್ತು ಸವಾಲಿನ ವೃತ್ತಿಯ ಜತೆಗೆ ಸಂಸಾರಿಕ ಜವಾಬ್ದಾರಿಗಳನ್ನೂ ನಿಭಾಯಿಸುತ್ತ, ಕೋವಿಡ್-19ನಂತಹ ಗಂಭೀರ ಪರಿಸ್ಥಿತಿಗಳಲ್ಲಿ ಒತ್ತಡಕ್ಕೊಳಗಾಗದೆ ಸೇವೆಯಲ್ಲೇ ಸಾರ್ಥಕತೆ ಕಾಣುವ ಸಮಸ್ತ ಶುಶ್ರೂಷಕಿಯರಿಗೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎಲ್ಲಾ ಶುಶ್ರೂಕಿಯರಿಗೆ 'ಅಂತಾರಾಷ್ಟ್ರೀಯ ದಾದಿಯರ ದಿನ' ದ ಶುಭಾಶಯ ತಿಳಿಸಿದ್ದಾರೆ.
ಇನ್ನು, ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರು, ಪ್ರಪಂಚ ಕೊರೊನಾ ಮಹಾಮಾರಿಯ ವಿರುದ್ಧ ಯುದ್ಧಕ್ಕೆ ನಿಂತಿರುವ ಸಂದರ್ಭದಲ್ಲಿಯೇ ವಿಶ್ವ ದಾದಿಯರ ದಿನ ಬಂದಿದ್ದು, ಸಮಸ್ತ ದಾದಿಯರಿಗೆ ಹಾರ್ದಿಕ ಶುಭಾಶಯಗಳು. ಈ ಮಹಾಸಂಕಟದ ಸಮಯದಲ್ಲಿ ಮಾತೃ ಹೃದಯದ ನರ್ಸ್ ಗಳು ಮಾಡುತ್ತಿರುವ ಸೇವೆ ನಮ್ಮ ಕಣ್ಣ ಮುಂದಿದೆ. ಅವರ ಈ ಸೇವೆಯನ್ನು ಸಮಾಜ ಸದಾಕಾಲ ಸ್ಮರಿಸುತ್ತದೆ. ದಾದಿಯರ ಜೀವನ ಮಟ್ಟವನ್ನು ಸುಧಾರಿಸಲು ಬಿ.ಎಸ್. ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 