ನೂತನ ಅತಿಥಿಗಳಿಗೆ ನಾಮಕರಣ ಮಾಡಿದ ಬಿಎಸ್ ವೈ
ಬೆಂಗಳೂರು, ಮೇ 9, ಲಾಕ್ ಡೌನ್ ನಡುವೆ ಕಳೆದ ವಾರ ಹೊಸ ಅತಿಥಿಗಳನ್ನು ಬರಮಾಡಿಕೊಂಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ನೂತನ ಅತಿಥಿಗಳಿಗೆ ನಾಮಕರಣ ಮಾಡಿದ್ದಾರೆ.ಕಳೆದ ಶುಭ ಶುಕ್ರವಾರದಂದು ಯಲಹಂಕ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್ ಅವರು ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರಿಗೆ ಗಿರ್ ತಳಿಯ ಹಸುಗಳನ್ನು ಉಡುಗೊರೆಯಾಗಿ ನೀಡಿದ್ದರು.ಶನಿವಾರ ಹೊಸ ಅತಿಥಿಗಳಿಗೆ ನಾಮಕರಣ ಮಾಡಿದ ಮುಖ್ಯಮಂತ್ರಿಗಳು, ಹಾಲು ಕೊಡುವ ಹಸುವಿಗೆ ಕಾವೇರಿ ಹಾಗೂ ಇನ್ನೊಂದು ಹಸುವಿಗೆ ಕೃಷ್ಣೆ ಎಂದು ಮತ್ತು ಕರುವಿಗೆ ಭೀಮ ಎಂದು ನಾಮಕರಣ ಮಾಡಿದ್ದಾರೆ.
ಪ್ರತಿ ದಿನ ಬೆಳಗ್ಗೆ ಮುಖ್ಯಮಂತ್ರಿಗಳು ವಾಯುವಿಹಾರಕ್ಕೆ ಭೀಮನನ್ನು ಒಂದು ರೌಂಡ್ ಕರೆದುಕೊಂಡು ಹೋಗುತ್ತಾರೆ. ಸದ್ಯ ಹಸುಗಳು ಹೊಸ ಮನೆಗೆ ಹೊಂದಿಕೊಳ್ಳುತ್ತಿದ್ದು, ಅತಿಥಿಗಳಿಗಾಗಿ ಮುಖ್ಯಮಂತ್ರಿ ಗಳು ಕಾವೇರಿ ನಿವಾಸದಲ್ಲಿ ಪ್ರತ್ಯೇಕ ಶೆಡ್ ನಿರ್ಮಾಣ ಮಾಡಿ ಆತ್ಮೀಯವಾಗಿ ನೋಡಿಕೊಳ್ಳುತ್ತಿದ್ದಾರೆ.ಇತ್ತೀಚೆಗೆ ಮುಖ್ಯಮಂತ್ರಿ ತಮ್ಮ ನಿವಾಸದಲ್ಲಿ ಬೆಕ್ಕಿಗೆ ಹಾಲು ನೀಡಿ, ಲಾಕ್ ಡೌನ್ ಸಂದರ್ಭದಲ್ಲಿ ಮೂಕಪ್ರಾಣಿಗಳಿಗೆ ಆಹಾರ ನೀಡುವಂತೆ ರಾಜ್ಯದ ಜನರಲ್ಲಿ ಮನವಿ ಮಾಡಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 