ಬಾಗಲಕೋಟೆ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿಎಸ್ವೈ ಭೇಟಿ
ಬಾಗಲಕೋಟೆ, ಆ 9 ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಬಾಗಲಕೋಟೆ ಜಿಲ್ಲೆಯ ಕೃಷ್ಣ, ಘಟಪ್ರಭಾ ಹಾಗೂ ಮಲ್ಲಪ್ರಭಾ ನದಿಯಿಂದ ಉಂಟಾಗಿರುವ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಇಂದು ಬೆಳ್ಳಿಗೆ ಶಾಸಕ ಮುರಗೇಶ ನಿರಾಣಿ ಅವರ ಮನೆಯಿಂದ ಎರಡು ಕೀ. ಮೀ. ವಾಕ್ ಮಾಡಿದ ಯಡಿಯೂರಪ್ಪ, ಘಟಪ್ರಭಾ ನದಿಯ ಪ್ರವಾಹ ದಿಂದ ಸಂತ್ರಸ್ಥರಾಗಿದ್ದ ಮುಧೋಳ ನಿವಾಸಿಗಳು ನಿರಾಶ್ರಿತರ ಕೇಂದ್ರ ಕ್ಕೆ ಭೇಟಿ ನೀಡಿ, ಸಂತ್ರಸ್ತರ ಸಮಸ್ಯೆಯನ್ನು ಆಲಿಸಿದರು. ಶಾಶ್ವತ ಪರಿಹಾರ ಸೇರಿದಂತೆ ಇತರ ಸೌಲಭ್ಯಗಳನ್ನು ನೀಡುವಂತೆ ಸಂತ್ರಸ್ತರು ಸಿಎಂಗೆ ಮನವಿ ಸಲ್ಲಿಸಿದರು. ಈ ವೇಳೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಬಿಎಸ್ವೈ ಭರವಸೆ ನೀಡಿದರು.
ನಂತರ ಕೃಷ್ಣ ನದಿ ಪ್ರವಾಹ ಪ್ರದೇಶ ಚಿಕ್ಕಪಡಸಲಗಿ ಬ್ಯಾರೇಜ್, ಹಿಪ್ಪರಗಿ ಬ್ಯಾರೇಜ್ ಹಾಗೂ ಘಟಪ್ರಭಾ ನದಿಯ ಪ್ರವಾಹ ಉಂಟಾಗಿರುವ ಡವಳೇಶ್ವರ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ತದನಂತರ ಬಾಗಲಕೋಟೆ ಮೂಲಕ ಕೂಡಲಸಂಗಮಕ್ಕೆ ಭೇಟಿ ನೀಡಿ, ಬಾದಾಮಿ ತಾಲೂಕಿನಲ್ಲಿ ಮಲ್ಲಪ್ರಭಾ ನದಿಯಿಂದ ಉಂಟಾಗಿರುವ ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತರ ಸಮಸ್ಯೆ ಆಲಿಸಲಿದ್ದಾರೆ.
ತದನಂತರ ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಎಲ್ಲ ವ್ಯವಸ್ಥೆ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 