ರಂಜಾನ್ ಹಬ್ಬಕ್ಕೆ ಶುಭಕೋರಿದ ಬಿಎಸ್ ವೈ
ಬೆಂಗಳೂರು, ಮೇ 25,ಇಂದು ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಸಚಿವರು ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ‘‘ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿಗೆ ಎದುರಾಗಿರುವ ಕೋವಿಡ್ ಸಂಕಷ್ಟಗಳು ಪರಿಹರಿಸಲಿ, ಎಲ್ಲರಿಗೂ ಸುಖ, ಶಾಂತಿ, ಸಮೃದ್ಧಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸೋಣ. ಎಲ್ಲರೂ ಮನೆಯೊಳಗೇ ಇದ್ದು, ಸುರಕ್ಷಿತವಾಗಿ ಹಬ್ಬವನ್ನು ಆಚರಿಸಿ. ಈದ್ ಮುಬಾರಕ್’’ ಎಂದು ಶುಭಾಶಯಗಳನ್ನು ತಿಳಿಸಿದ್ದಾರೆ.ಆರೋಗ್ಯ ಸಚಿವ ಬಿ ಶ್ರೀರಾಮುಲು ಅವರು, ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು.ಮನೆಗಳಲ್ಲಿಯೇ ಹಬ್ಬವನ್ನು ಆಚರಿಸೋಣ, ಕೊರೊನ ಹರಡುವಿಕೆ ತಡೆಗಟ್ಟೋಣ ಎಂದು ವಿನಂತಿಸಿಕೊಂಡಿದ್ದಾರೆ.ಇನ್ನು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು, ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ಈದ್ ಹಬ್ಬವು ಎಲ್ಲರಿಗೂ ಸುಖ, ಸಂತೋಷ, ಆರೋಗ್ಯ, ಸಮೃದ್ಧಿಗಳನ್ನು ಅನುಗ್ರಹಿಸಲಿ ಎಂದು ಹಾರೈಸಿದ್ದಾರೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 