ಬುದ್ಧ, ಅಂಬೇಡ್ಕರ್ ಪುತ್ಥಳಿ ಧ್ವಂಸ : 8 ಮಂದಿ ವಿರುದ್ಧ ಪ್ರಕರಣ
ಬಲರಾಮ್ ಪುರ, ಮಾ 07, ಉತ್ತರ ಪ್ರದೇಶ ಜಿlಲ್ಲೆಯ ಉತ್ರೌಲಾ ಕೊತ್ವಾಲಿ ವಲಯದಲ್ಲಿ ಬುದ್ಧ, ಅಂಬೇಡ್ಕರ್ ಪುತ್ಥಳಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ 8 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉತ್ರೌಲಾ ಕೊತ್ವಾಲಿ ವಲಯದ ರಸೌಲಾಬಾದ್ ಜಿಲ್ಲೆಯಲ್ಲಿ ಗುರುವಾರ ದುಷ್ಕರ್ಮಿಗಳು ಅಂಬೇಡ್ಕರ್ ಹಾಗೂ ಬುದ್ಧನ ಕೆಲ ಪ್ರತಿಮೆಗಳನ್ನು ವಿರೂಪಗೊಳಿಸಿದ್ದರು. ಈ ಸಂಬಂಧ ಶನಿವಾರ 8ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದುಷ್ಕೃತ್ಯವನ್ನು ತಡೆಯಲು ಹೋದವರ ಮೇಲೂ ಹಲ್ಲೆ ನಡೆಸಿ ನಿಂದಿಸಲಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಸದ್ಯಕ್ಕೆ ಗ್ರಾಮದಲ್ಲಿ ಶಾಂತಿ ನೆಲೆಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 