ಬಸ್ಸು ಚಾಲಕ ಸಾವು: ಹೃದಯಾಘಾತ ಶಂಕೆ
ಮಂಗಳೂರು, ಮಾ.11, ನಿಲ್ಲಿಸಿದ್ದ ಕೆಎಸ್ಆರ್ಟಿಸಿ ಬಸ್ಸಿನೊಳಗೆ ಹೃದಯಾಘಾತದಿಂದ ಚಾಲಕ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.40 ವರ್ಷದ ಬೀದರ್ ಮೂಲದ ರೇವಣ್ಣಪ್ಪ, ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಿಲ್ಲಿಸಿದ್ದ ಬಸ್ಸಿನಲ್ಲಿ ಮೃತ ಪಟ್ಟಿದ್ದಾರೆ. ಮಂಗಳವಾರ ಪುತ್ತೂರಿನಿಂದ ಸಂಜೆ ಕಡಬಕ್ಕೆ ಆಗಮಿಸಿದ ಬಸ್ಸನ್ನು ಕಡಬದ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಮೀಪ ಹೆದ್ದಾರಿಯ ಪಕ್ಕದಲ್ಲಿ ರಾತ್ರಿ ನಿಲ್ಲಿಸಲಾಗಿತ್ತು. ಬುಧವಾರಬೆಳಗ್ಗೆ ಆ ಬಸ್ಸು ಶಾಂತಿಮೊಗರು ಮಾರ್ಗವಾಗಿ ಪುತ್ತೂರಿಗೆ ತೆರಳಬೇಕಿತ್ತು. ಆದರೆ, ಬೆಳಗ್ಗೆ ನಿರ್ವಾಹಕ ಎದ್ದು ಚಾಲಕನನ್ನು ನೋಡಿದಾಗ ಚಾಲಕ ಮುಗ್ಗರಿಸಿ ಕುಳಿತ ಸ್ಥಿತಿಯಲ್ಲಿ ಕಂಡುಬಂದಿದ್ದು, ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 