ಸ್ನಾತಕೋತ್ತರ ಕೇಂದ್ರದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ 134 ನೇ ಜಯಂತಿ ಆಚರಣೆ
Babasaheb Ambedkar's 134th birth anniversary celebrated at Postgraduate Centre
ಸ್ನಾತಕೋತ್ತರ ಕೇಂದ್ರದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ 134 ನೇ ಜಯಂತಿ ಆಚರಣೆ
ಕೊಪ್ಪಳ 14: ಭಾರತದ ಕಾನೂನು ಮತ್ತು ಸಾಮಾಜಿಕ ಚೌಕಟ್ಟನ್ನು ರೂಪಿಸುವಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆಗಳು ಜನರಿಗೆ ಸ್ಫೂರ್ತಿ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಕೆ.ವಿ.ಪ್ರಸಾದ ಹೇಳಿದರು.ಯಲಬುರ್ಗಾ ಪಟ್ಟಣದ ಸ್ನಾತಕೋತ್ತರ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134 ನೇ ಜಯಂತಿ ಆಚರಣೆಯಲ್ಲಿ ಮಾತನಾಡಿದರು. ಬಿ.ಆರ್. ಅಂಬೇಡ್ಕರ್ ಬಹುಮುಖ ಪ್ರತಿಭೆಯ ವ್ಯಕ್ತಿಯಾಗಿದ್ದರು. ಅವರು ರಾಜಕಾರಣಿ, ವಕೀಲರು, ಅರ್ಥಶಾಸ್ತ್ರಜ್ಞರು ಮತ್ತು ಸಮಾಜ ಸುಧಾರಕರಾಗಿದ್ದರು, ದೇಶದ ಪ್ರತಿಯೊಬ್ಬರ ಪಾಲಿಗೆ ಪವಿತ್ರ ಗ್ರಂಥವಾದ ಸಂವಿಧಾನವನ್ನು ನೀಡಿದ ಹಿಂದಿನ ದೊಡ್ಡ ಶಕ್ತಿ, ಬದುಕು, ಜೀವನಶೈಲಿ, ಅವರ ಕೊಡುಗೆಗಳು ಎಲ್ಲರಿಗೂ ಆದರ್ಶವಾಗಿದೆ ಎಂದರು.ಕಾರ್ಯಕ್ರಮದಲ್ಲಿ ಯಲಬುರ್ಗಾ ಸ್ನಾತಕೋತ್ತರ ಕೇಂದ್ರದ ಆಡಳಿತಾಧಿಕಾರಿ ಪ್ರೊ.ಛತ್ರದ, ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ಪ್ರೊ. ತಿಮ್ಮಾರೆಡ್ಡಿ ಮೇಟಿ ಹಾಗೂ ನಾನಾ ವಿಭಾಗದ ಉಪನ್ಯಾಸಕರು ಸೇರಿದಂತೆ ಬೋಧಕೇತರ ಸಿಬ್ಬಂದಿಗಳು ಇದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 