ಬಾಬು ಜಗಜೀವನ್ ರಾಮ್ ಜಯಂತಿ: ಗಣ್ಯರಿಂದ ಗೌರವ ಸಲ್ಲಿಕೆ
ಬೆಂಗಳೂರು,
ಏ.5,ಭಾರತದ ಮಾಜಿ ಉಪಪ್ರಧಾನಿ ಬಾಬು ಜಗಜೀವನ ರಾಮ್ ಅವರ ಜನ್ಮದಿನದ ಅಂಗವಾಗಿ
ಮುಖ್ಯಮಂತ್ರಿ ಸೇರಿ ಅನೇಕ ಗಣ್ಯರು ಗೌರವ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.
ಯಡಿಯೂರಪ್ಪ ಟ್ವೀಟ್ ಮಾಡಿ, ಬಡವರ ಹಸಿವು ನೀಗಿಸಿದ ಹಸಿರುಕ್ರಾಂತಿಯ ಹರಿಕಾರ, ಶೋಷಿತರ
ಹಕ್ಕಿಗಾಗಿ ಹೋರಾಡಿದ ನಾಯಕ, ಬಡವರ ಆಶಾಕಿರಣವಾಗಿ ಗುರುತಿಸಿಕೊಂಡು 'ಬಾಬೂಜಿ' ಎಂದೇ
ಹೆಸರಾದ ಬಾಬು ಜಗಜೀವನ ರಾಮ್ ಅವರ ಜಯಂತಿಯಂದು ದೇಶಕ್ಕೆ ಅವರು ನೀಡಿದ ಸ್ಫೂರ್ತಿದಾಯಕ
ಸೇವೆಯನ್ನು ಸ್ಮರಿಸೋಣ ಎಂದು ತಿಳಿಸಿದ್ದಾರೆ.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್
ಮಾಡಿ, ಜಾತಿ,ಧರ್ಮ,ಭಾಷೆ,ಪ್ರದೇಶ- ಇವೆಲ್ಲಕ್ಕಿಂತಲೂ ಮೊದಲು ದೇಶ' ಎಂದು ಸಾರಿದ
ಅಪ್ರತಿಮ ದೇಶಭಕ್ತ, ಹಸಿರುಕ್ರಾಂತಿಯ ಹರಿಕಾರ, ದಮನಿತ ಸಮುದಾಯದ ಆತ್ಮವಿಶ್ವಾಸ
ಪ್ರತೀಕ,ಬಾಬು ಜಗಜೀವನ ರಾಮ್ ಅವರಿಗೆ ಹುಟ್ಟುಹಬ್ಬದ ದಿನದ ಗೌರವಪೂರ್ವಕ ನಮನಗಳು ಎಂದು
ತಿಳಿಸಿದ್ದಾರೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ, ಹಿರಿಯ
ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸುಧಾರಕ, ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ,
ಮಾಜಿ ಉಪಪ್ರಧಾನಿ ಶ್ರೀ ಬಾಬು ಜಗಜೀವನರಾಮ್ ಜಯಂತಿಯಂದು ಅವರನ್ನು ಗೌರವದಿಂದ
ಸ್ಮರಿಸುತ್ತೇನೆ. ಶೋಷಿತರ ಹಕ್ಕಿಗಾಗಿ ಅವರು ಮಾಡಿದ ಹೋರಾಟ ಮತ್ತು ಅವರ ದೇಶಸೇವೆ ಸದಾ
ಸ್ಫೂರ್ತಿದಾಯಕ ಎಂದು ತಿಳಿಸಿದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 