ಬ್ಯಾಡಗಿ05: ಭಾರತದ ಉಪ ಪ್ರಧಾನಿಯಾಗಿದ್ದ ಬಾಬು ಜಗಜೀವನರಾಮ ಅವರು ದೇಶದಲ್ಲಿನ ಅಸ್ಪ್ರಶ್ಯತಾ ನಿವಾರಣೆಯ ಹೋರಾಟದಲ್ಲಿ ಶ್ರಮಿಸಿದ ಮಹಾನ್ ದಲಿತ ನಾಯಕರಾಗಿದ್ದಾರೆ ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.
ರವಿವಾರ ಸ್ಥಳೀಯ ತಹಶೀಲ್ದಾರ ಕಛೇರಿಯಲ್ಲಿ ತಾಲೂಕಾ ಆಡಳಿತದಿಂದ ಏರ್ಪಡಿಸಿದ್ದ ಭಾರತದ ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಮ ಅವರ 113 ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು "ಬಾಬೂಜಿ" ಎಂದು ಖ್ಯಾತರಾದ ಜಗಜೀವನರಾಮ ರವರು ಸ್ವಾತಂತ್ರ ಹೋರಾಟಗಾರರಷ್ಟೆ ಅಲ್ಲದೇ, ಸಮಾಜ ಸೇವಕರೂ ಆಗಿದ್ದರು. ಬಿಹಾರದ ದಲಿತ ಕುಟುಂಬದಲ್ಲಿ ಜನಿಸಿದ ಇವರು ಅಸ್ಪರ್ಷತೆಯ ನಿವಾರಣೆಗಾಗಿ ಪ್ರಮುಖ ಪಾತ್ರ ವಹಿಸಿದ್ದಾರೆ. ಜವಾಹರಲಾಲ್ ನೆಹರೂ ಅವರ ಕೇಂದ್ರ ಸಕರ್ಾರದ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದ ಇವರು ಅನಂತರ ಮೊರಾಜರ್ಿ ದೇಸಾಯಿಯವರ ಕಾಲದಲ್ಲಿ ಭಾರತದ ಉಪ ಪ್ರಧಾನಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಆದರ್ಶ ಮತ್ತು ಸಿದ್ಧಾಂತಗಳು ಅವಿಸ್ಮರಣೀಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ ಶರಣಮ್ಮ ಕಾರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿದರ್ೆಶಕ ಪುಂಡಲೀಕ ಮಾನವರೆ, ವ್ಯವಸ್ಥಾಪಕ ಹನುಮಂತಪ್ಪ ಲಮಾಣಿ, ಎಪಿಎಂಸಿ ಸದಸ್ಯ ವಿಜಯ ಮಾಳಗಿ, ನಾಗರಾಜ ಹಾವನೂರ, ಗ್ರಾಮ ಲೆಕ್ಕಾಧಿಕಾರಿ ಗುಂಡಪ್ಪ ಹುಬ್ಬಳ್ಳಿ, ರಂಗಪ್ಪಗೌಡ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.