ಬಾಬು ಜಗಜೀವನರಾಂ-ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ
Babu Jagjivanram-Dr. B.R. Ambedkar Jayanti Preparatory Meeting
ಸವದತ್ತಿ 26: ನಗರದ ಕೃಷಿ ಇಲಾಖೆಯ ಸಭಾಭವನದಲ್ಲಿ ಸ್ಥಳೀಯ ಶಾಸಕ ವಿಶ್ವಾಸ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಪೂರ್ವಭಾವಿ ಸಭೆಯು ಜರುಗಿತು.
ಏಪ್ರಿಲ್ ತಿಂಗಳಿನಲ್ಲಿ ಬರುವ ಇಬ್ಬರು ಮಹಾನ್ ನಾಯಕರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಏಪ್ರಿಲ್ 5 ರಂದು ನಡೆಯುವ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಜಯಂತಿ ಹಾಗೂ ಏಪ್ರಿಲ್ 14 ರಂದು ನಡೆಯುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ.ಆಚರಣೆಯ ಎರಡೂ ಜಯಂತಿಗಳನ್ನು ಯಾವುದೇ ಲೋಪದೋಷಗಳಿಲ್ಲದೆ, ಸಕಲ ಸರ್ಕಾರಿ ಮರ್ಯಾದೆಗಳೊಂದಿಗೆ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಯಿತು. ಜಯಂತಿಗಳ ಅಂಗವಾಗಿ ಹಮ್ಮಿಕೊಳ್ಳುವ ಮೆರವಣಿಗೆ, ವೇದಿಕೆ ಕಾರ್ಯಕ್ರಮ ಮತ್ತು ಸ್ವಚ್ಛತಾ ಕಾರ್ಯಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು."ದೇಶದ ಅಭಿವೃದ್ಧಿಗೆ ಮತ್ತು ಸಂವಿಧಾನದ ಘನತೆಗೆ ಅಪಾರ ಕೊಡುಗೆ ನೀಡಿದ ಈ ಮಹನೀಯರ ತತ್ತ್ವಗಳು ಇಂದಿನ ಪೀಳಿಗೆಗೆ ಮಾದರಿಯಾಗಿವೆ. ಅವರ ಜಯಂತಿಗಳನ್ನು ಎಲ್ಲರೂ ಒಗ್ಗೂಡಿ ಸಂಭ್ರಮದಿಂದ ಆಚರಿಸೋಣ ಎಂದು ಹೇಳಿದರು.
ಈ ಸಭೆಯಲ್ಲಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ,ನಗರಸಭೆ ಪೌರಾಯುಕ್ತ ಸಂಗನಬಸಯ್ಯ, ತಾಪಂ ಎಇಇ ಆನಂದ ಬಡಕುಂದ್ರಿ, ಬಿಇಒ ಎ.ಎ.ಖಾಜಿ. ಎಚ್.ಆಯ್. ಕದ್ರಾಪೂರಕರ, ಶಿವಪ್ರಕಾಶ್ ಪಾಟೀಲ ವಿವಿಧ ಇಲಾಖೆಯ ಅಧಿಕಾರಿಗಳು, ದಲಿತ ಸಂಘಟನೆಗಳ ಮುಖಂಡರು ಹಾಗೂ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು, ಕಾರ್ಯಕ್ರಮದ ಯಶಸ್ಸಿಗೆ ಸಲಹೆ-ಸೂಚನೆಗಳನ್ನು ಹಂಚಿಕೊಂಡರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 