ಬ್ಯಾಡಗಿ ಐದನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ
Badagi village administrators' strike enters fifth day
ಬ್ಯಾಡಗಿ ಐದನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ
ಬ್ಯಾಡಗಿ 14: ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳಿಂದ ಕೈಗೊಂಡ 2 ನೇ ಹಂತದ ಮುಷ್ಕರ ಶುಕ್ರವಾರ ಪಟ್ಟಣದಲ್ಲಿ ಐದನೇ ದಿನಕ್ಕೆ ಕಾಲಿಟ್ಟಿದೆ.ಮೂಲ ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡುವ ಬಗ್ಗೆ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳ ಕಲ್ಪಿಸುವ ಬಗ್ಗೆ ಅಂತರ ಜಿಲ್ಲಾ ವರ್ಗಾವಣೆಯ ಕೆಸಿಎಸ್ಆರ್ ನಿಯಮ 16 ಎ ಅನ್ನು ಮರುಸ್ಥಾಪಿಸುವ ಬಗ್ಗೆ ಕ್ರಮಕ್ಕೆ ಮುಷ್ಕರ ನಿರತರು ಒತ್ತಾಯಿಸಿ ಮುಷ್ಕರ ಪ್ರಾರಂಭವಾಗಿದೆ.ತಾಲೂಕಾ ಗ್ರಾಮಾಡಳಿತಗಾರರ ಮುಷ್ಕರದಲ್ಲಿ ತಾಲೂಕಾ ಗ್ರಾಮಾಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಃ ಓ ಕವಾಸ್ಕ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಂಡಪ್ಪ ಹುಬ್ಬಳ್ಳಿ,ತಾಲೂಕಾ ಉಪಾಧ್ಯಕ್ಷ ಹೇಮಾ ಗಳಗನಾಥ ಖಜಾಂಚಿ ಸಂತೋಷ ವಿಭೂತಿ,ಗೌರವಾಧ್ಯಕ್ಷ ಶಬ್ಬೀರ ಬಾಗೇವಾಡಿ, ಜಿಲ್ಲಾ ಉಪಾಧ್ಯಕ್ಷ- ಪ್ರಭಾವತಿ ಬಡಿಗೇರ, ಶಶಿಧರ ಹಿರೇಮಠ, ಲಕ್ಷ್ಮಿ, ಶೋಭಾ, ರೇಖಾ, ಹೇಮಾ, ಸೇರಿದಂತೆ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಎಲ್ಲ ಪದಾಧಿಕಾರಿಗಳು ಭಾಗವಹಿಸಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 