ಬಾಗಲಕೋಟೆ: ಕಳ್ಳತನ ಪ್ರಕರಣ: ಆರೋಪಿ ಬಂಧನ
ಲೋಕದರ್ಶನ ವರದಿ
ಬಾಗಲಕೋಟೆ 10: ಜಿಲ್ಲೆಯ ಕೊಣ್ಣೂರ ಮತ್ತು ಮುಧೋಳ ಶಹರದಲ್ಲಿ ನಡೆದ ಕಳ್ಳತನ ಆರೋಪದಡಿ ಲೋಕೇಶ ರಾವಸಾಬ ಸುತಾರ ಎಂಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ತಿಳಿಸಿದ್ದಾರೆ.
ಡಿ.10 ರಂದು ಮಿರಜ ತಾಲೂಕಿನ ಲಿಂಗನೂರು ಗ್ರಾಮದ ಲೋಕೇಶ ಸುತಾರ ಮೇಲೆ ದಸ್ತಗಿರಿ ಮಾಡಿ ಆರೋಪಿಯಿಂದ ಒಟ್ಟು 10 ಪ್ರಕರಣಗಳಲ್ಲಿ ಕಳ್ಳತನ ಮಾಡಿದ ಸುಮಾರು 501.5 ಗ್ರಾಂ ಬಂಗಾರದ ಆಭರಣಗಳು ಹಾಗೂ 690 ಗ್ರಾಂ ಬೆಳ್ಳಿಯ ಆಭರಣಗಳು ಹಾಗೂ ಕಳ್ಳತನ ಮಾಡಲು ಉಪಯೋಗಿಸಿದ ಒಂದು ಹೋಂಡಾ ಆಕರ್ಡ ಕಾರ ಹಾಗೂ ರಾಯಲ್ ಎನ್ಫೀಲ್ಡ ಬುಲೋಟ್ ವಶಪಡಿಸಿಕೊಂಡು ತನಿಖೆ ಕೈಗೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಚಾಣಾಕ್ಷತನದಿಂದ ಕರ್ತವ್ಯ ನಿರ್ವಹಿಸಿದ ಜಮಖಂಡಿ ಸಿಪಿಐ ಡಿ.ಕೆ.ಪಾಟೀಲ, ಪಿಎಸ್ಐ ಅನೀಲಕುಮಾರ ರಾಠೋಡ, ಎ.ಎಸ್.ಐ ಬಿ.ಎಂ.ಕುಂಬಾರ ಹಾಗೂ ಸಿಬ್ಬಂದಿಗಳಾದ ಬಾಹುಬಲಿ ಕುಸನಾಳೆ, ಗಣಪತಿ ಮೊಕಾಶಿ, ವಿ.ವಿ.ಕೋಲಂಬಿ, ಪಿ.ಐ.ಕಾಜಗಾರ, ಎಂ.ಎಸ್.ಶೇಗುಣಸಿ, ಸಿದ್ದು ಹನಗಂಡಿ, ಉಮೇಶ ಚಲವಾದಿ, ಸಂಗಮೇಶ ತುಪ್ಪದ, ಐ.ಜಿ.ದಾಶ್ಯಾಳ, ಎಂ.ಡಿ.ಕೊಡೊಳ್ಳಿ ಹಾಗೂ ಜೀಪ ಚಾಲಕ ಶಂಕರ ಮೂಲಿಮನಿ, ಮುತ್ತು ಚಿಪ್ಪಲಕಟ್ಟಿ ಅವರನ್ನು ಪ್ರಶಂಶಿಸಿ ಸೂಕ್ತ ಬಹುಮಾನ ಘೋಷಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 