5ನೇ ದಿನಕ್ಕೆ ಬಗರ್ ಹುಕುಂ ಸಾಗುವಳಿದಾರರ ಅಹೋರಾತ್ರಿ ಧರಣಿ
Bagar Hukum cultivators' day-night protest enters 5th day
ಗದಗ 22 : ಉತ್ತರ ಕರ್ನಾಟಕ ಮಹಾ ಸಭೆಯ ವಿವಿಧ ಬೇಡಿಕೆಗಳ ಈಡೇರಿಕೆಗೆಂದು ಗದಗ ಜಿಲ್ಲಾಡಳಿತ ಕಚೇರಿ ಮುಂಭಾಗದಲ್ಲಿ ನಡೆಯುತ್ತಿರುವ ಬಗರ್ ಹುಕುಂ ಸಾಗುವಳಿದಾರರ ಅಹೋರಾತ್ರಿ ಧರಣಿ ಇಂದು 5ನೇ ದಿನಕ್ಕೆ ಮುಂದುವರಿದಿದೆ. ಶಿರಹಟ್ಟಿಯ ಫಕೀರೇಶ್ವರ ಮಠದಿಂದ 30 ಕಿ.ಮೀ ಪಾದಯಾತ್ರೆ ಮಾಡಿ ಜಿಲ್ಲಾಡಳಿತ ಕಚೇರಿ ತಲುಪಿದ ಬಳಿಕ ಆರಂಭವಾದ ಈ ಧರಣಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ.
ಧರಣಿ ಸ್ಥಳದಲ್ಲಿ ಮಾತನಾಡಿದ ಉತ್ತರ ಕರ್ನಾಟಕ ಮಹಾಸಭಾದ ರಾಜ್ಯಾಧ್ಯಕ್ಷ ರವಿಕಾಂತಅಂಗಡಿ, ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಬಂದು ನಮ್ಮ ಬೇಡಿಕೆಗಳನ್ನು ಇಡೇರಿಸುವವರೆಗೂ ಹೋರಾಟ ಹಿಂತೆಗೆದುಕೊಳ್ಳುವುದಿಲ್ಲ. ರೈತರು ತಲೆ ತಲಾಂತರಗಳಿಂದ ಅರಣ್ಯ ಜಮೀನುಗಳನ್ನು ಸಾಗುವಳಿ ಮಾಡಿಕೊಂಡು ಬದುಕು ನಡೆಸುತ್ತಿದ್ದಾರೆ. ಆದರೆ ಸರ್ಕಾರ ಹಕ್ಕುಪತ್ರ ನೀಡದೇ, ರೈತರನ್ನು ಕಿರುಕುಳಕ್ಕೆ ಒಳಪಡಿಸುತ್ತಿದೆ. ಜೊತೆಗೆ ನಾಗಾವಿ ಗ್ರಾಮದಲ್ಲಿನ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯ ನಿರ್ಮಾಣಕ್ಕಾಗಿ ರೈತರ ಪೂರ್ವಜರ ಕಾಲದಿಂದ ಸಾಗುವಳಿ ಮಾಡುತ್ತಿದ್ದ ನೂರಾರುಎಕರೆ ಕೃಷಿ ಭೂಮಿಯನ್ನು ಪರಿಹಾರ ನೀಡದೇ ಒಕ್ಕಲೇಬ್ಬಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಧರಣಿಯನ್ನು ಬೆಂಬಲಿಸಿ ಜಯ ಕರ್ನಾಟಕ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶೀ ಚಂದ್ರಕಾಂತ ಚವ್ಹಾಣ ಮಾತನಾಡುತ್ತಾ ಧರಣಿ ನಿರತರ ಬೇಡಿಕೆಗಳನ್ನು ಸರ್ಕಾರ ಕೂಡಲೇ ಇಡೇರಿಸಬೇಕು, ಅವರು ತಮ್ಮ ಹಕ್ಕಿಗಾಗಿ ಹೋರಾಟವನ್ನು ಮಾಡುತ್ತಿದ್ದು, ಅವರ ಬೇಡಿಕೆಗಳು ನ್ಯಾಯ ಸಮ್ಮತವಾದ್ದು, ಜಿಲ್ಲಾಡಳಿತ ರೈತರ ಹೋರಾಟವನ್ನು ಕಡೆಗಣಿಸಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಬಸವಣೇಪ್ಪ ಚಿಂಚಲಿ, ಎನ್.ಟಿ. ಪೂಜಾರ, ಸೇರಿದಂತೆ ಜಿಲ್ಲೆಯ ಹಲವು ರೈತ ಸಂಘಟನೆಯ ಮುಖಂಡರು ಮತ್ತು ರೈತರು ಹಾಜರಿದ್ದರು.
ಅಹೋರಾತ್ರಿ ಧರಣಿ ನಿರತ ರೈತ ಅಸ್ವಸ್ಥ..!
ಐದು ದಿನಗಳಿಂದ ಉತ್ತರ ಕರ್ನಾಟಕ ಮಹಾಸಭೆಯ ವಿವಿಧ ಬೇಡಿಕೆಗಳ ಈಡೇರಿಕೆಗೆಂದು ಅಹೋರಾತ್ರಿ ಧರಣಿ ನಡೆಸುತ್ತಿರುವ ವೇಳೆ, ಶುಕ್ರವಾರ ಧರಣಿ ನಿರತ ರೈತನೊಬ್ಬ ಅಸ್ವಸ್ಥಗೊಂಡ ಘಟನೆ ನಡೆದಿದೆ.
ಅಸ್ವಸ್ಥ ರೈತನಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲಾವೆಂದು ಆರೋಗ್ಯ ಇಲಾಖೆ ವಿರುದ್ಧಘೋಷಣೆ ಕೂಗಿ ಸರಿಯಾದ ಆರೋಗ್ಯ ಸೇವೆ ನೀಡಲು ಒತ್ತಾಯಿಸಿದರು.
ಈ ಹೋರಾಟ ‘ಮಾಡು ಇಲ್ಲವೇ ಮಡಿ’ ಹೋರಾಟವಾಗಿದೆ. ಇಂದಿಗೆ ನಮ್ಮ ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.ಜಿಲ್ಲೆಯ ಹಲವು ವಂಚಿತರೈತ ಕುಟುಂಬಗಳು ಮಳೆ, ಗಾಳಿ, ಚಳಿ ಲೆಕ್ಕಿಸದೆ ಹಗಲು-ರಾತ್ರಿಎನ್ನದೆ ಈ ಅಹೋರಾತ್ರಿ ಧರಣಿಯಲ್ಲಿ ಕುಳಿತಿದ್ದು, ಈ ಕುಡಲೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಈ ಹೋರಾಟವನ್ನುಗಂಭೀರವಾಗಿ ಪರಿಗಣಿಸಿ, ನೊಂದ ರೈತರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಬೇಕು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 