ಇಂದು ಕೆ.ಎಲ್.ಇ ಕಾಲೇಜಿನಲ್ಲಿ ಬಹುರೂಪಿ ಡಾ.ಎಸ್.ಎಲ್. ಬೈರ್ಪ ಕಾರ್ಯಕ್ರಮ
Bahurupi Dr. S.L. Byrpa program at KLE College today
ಗದಗ 14: ನಗರದ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗವು ಇತ್ತೀಚಿಗೆ ನಮ್ಮನ್ನಗಲಿದ ಹಿರಿಯ ಸಾಹಿತಿ ಕನ್ನಡ ಕಾದಂಬರಿಗಳ ಮಹರ್ಷಿ ಡಾ. ಎಸ್. ಎಲ್. ಬೈರ್ಪನವರ ಕುರಿತಾದ ‘ಬಹುರೂಪಿ ಡಾ. ಎಸ್. ಎಲ್. ಬೈರ್ಪ’ ಕಾರ್ಯಕ್ರಮವನ್ನು ಇಂದು (15-11-2025) ಮುಂಜಾನೆ 09.00 ಘಂಟೆಗೆ ಆಯೋಜಿಸಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ, ನವದೆಹಲಿ ನಿರ್ಮಿಸಿರುವ ಹಿರಿಯ ನಿರ್ದೇಶಕ ಪಿ. ಶೇಷಾದ್ರಿ ನಿರ್ದೇಶಿಸಿರುವ ‘ಡಾ. ಎಸ್. ಎಲ್ ಬೈರ್ಪನವರ ಜೀವನ ಮತ್ತು ಕೃತಿಗಳು’ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಗುವುದು.
ಹಿರಿಯ ನ್ಯಾಯವಾದಿಗಳಾದ ಸುಧೀಂದ್ರಸಿಂಹ ಘೋರೆ್ಡಯವರು ‘ಡಾ. ಎಸ್. ಎಲ್ ಬೈರ್ಪನವರ ಬದುಕು ಬರಹ’ ವಿಶೇಷ ಉಪನ್ಯಾಸ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನೆಡಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎ. ಕೆ. ಮಠ ವಹಿಸುವರು ಆಸಕ್ತರು ಭಾಗವಹಿಸಲು ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಅಂದಯ್ಯ ಅರವಟಗಿಮಠ ಕೋರಿಕೊಂಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 