ಮಾನಹಾನಿ ಪ್ರಕರಣ: ರಾಹುಲ್ಗೆ ಜಾಮೀನು
ಮುಂಬೈ 4: ಪತ್ರಕರ್ತ ಗೌರಿ ಲಂಕೇಶ್ ಹತ್ಯೆಗೆ ಬಿಜೆಪಿ-ಆರ್ಎಸ್ಎಸ್ಸಿದ್ಧಾಂತ ಕಾರಣ ಎಂಬ ಹೇಳಿಕೆ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಆರ್ ಎಸ್ ಎಸ್ ಕಾರ್ಯಕರ್ತರೊಬ್ಬರು ಹೊಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸ್ಥಳೀಯ ನ್ಯಾಯಾಲಯ ಅವರಿಗೆ ಗುರುವಾರ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಲಯದ ಎದುರು ಹಾಜರಾಗಿದ್ದ ರಾಹುಲ್ ಗಾಂಧಿ "ತಾವೇನು ತಪ್ಪು ಎಸಗಿಲ್ಲ ಎಂದು ವಾದಿಸಿದರು, ನಂತರ ನ್ಯಾಯಾಲಯ ಅವರಿಗೆ 15 ಸಾವಿರ ರೂಪಾಯಿ ಭದ್ರತೆಯ ಮೇಲೆ ಜಾಮೀನು ಮಂಜೂರು ಮಾಡಿತು ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ಏಕನಾಥ್ ಗಾಯಕ್ವಾಡ್ ರಾಹುಲ್ ಗಾಂಧಿ ಅವರಿಗೆ ಶೂರಿಟಿ ನೀಡಿದರು. ದೂರುದಾರ ಧೃತಿಮಾನ್ ಜೋಷಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಸಿಪಿಎಂ ನಾಯಕ ಸೀತಾರಾಮ್ ಯಚೂರಿ ವಿರುದ್ದವೂ ಇಂತಹದೇ ಪ್ರಕರಣ ದಾಖಲಿಸಿದ್ದರು, ನಂತರ ಅವುಗಳನ್ನು ನ್ಯಾಯಾಲಯ ವಜಾಗೊಳಿಸಿತ್ತು ಗೌರಿ ಲಂಕೇಶ್ ಹತ್ಯೆಗೊಳಿಸಿದ 24 ಗಂಟೆಗಳಲ್ಲಿ ಕೊಲೆಗೆ ಆರ್ ಎಸ್ ಎಸ್ ಸಿದ್ಧಾಂತಗಳೇ ಕಾರಣ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು ಎಂದು ಅರ್ಜಿದಾರ ಧೃತಿಮಾನ್ ಜೋಷಿ ತಮ್ಮ ಅರ್ಜಿಯಲ್ಲಿ ದೂರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 