ಬಾಳೇಸರ: ಮಳೆ, ಗಾಳಿಗೆ ಅಪಾರ ಹಾನಿ
ಲೋಕದರ್ಶನ ವರದಿ
ಸಿದ್ದಾಪುರ: ತಾಲೂಕಿನ ಬಾಳೇಸರದಲ್ಲಿ ಬುಧವಾರ ರಾತ್ರಿ ಬೀಸಿದ ಗಾಳಿಗೆ ಹಾಗೂ ಸುರಿದ ಮಳೆಗೆ ಬಿಎಸ್ಎನ್ಎಲ್ನ ಟವರ್, ಪೊವರ್ ಪ್ಲಾಂಟ್ನ ಮನೆಯ ಮೇಲ್ಚಾವಣಿ ಹಾರಿ ಹೋಗಿ ಉಪಕರಗಳು ಹಾನಿಗೊಂಡಿದೆ.
ಮೇಲ್ಚಾವಣಿ ಹಾರಿ ಹೋಗಿದ್ದರಿಂದ ಒಳಗಡೆ ನೀರು ತುಂಬಿಕೊಂಡಿದೆ. ಸ್ಥಿರ ದೂರವಾಣಿ ಹಾಗೂ ಮೊಬೈಲ್ ಟವರ್ ಸೇವೆ ಸ್ಥಗಿತಗೊಂಡಿದೆ.
ಈ ಕುರಿತು ಬಿಎಸ್ಎನ್ಲ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ಸ್ಥಿರ ಹಾಗೂ ಮೊಬೈಲ್ ಟವರ್ ಸರಿಪಡಿಸಿ ಗ್ರಾಹಕರಿಗೆ ಅನುಕೂಲಮಾಡಿಕೊಡುವಂತೆ ಬಾಳೇಸರ ಸುತ್ತಮುತ್ತಲಿನ ದೂರವಾಣಿ ಗ್ರಾಹಕರು ಆಗ್ರಹಿಸಿದ್ದಾರೆ.
ಬಿದ್ರಕಾನ ಗ್ರಾಪಂ ವ್ಯಾಪ್ತಿಯ ಮಣ್ಣಿಕೊಪ್ಪದ ಮಾದೇವ ಗೋವಿಂದ ನಾಯ್ಕ ಅವರ ಮನೆಯ ಮೇಲೆ ಮರವೊಂದು ಬಿದ್ದು ಭಾಗಶಃ ಮನೆ ಜಖಂಗೊಂಡಿದೆ. ಅಂದಾಜು 20ಸಾವಿರ ರೂ ಹಾನಿ ಸಂಭವಿಸಿದೆ.
ಇಟಗಿ ಸಮೀಪದ ಚಂದ್ರಘಟಗಿಯ ವಾಸ್ತವ್ಯದ ಮನೆಯೊಂದಕ್ಕೆ ಸಿಡಿಲು ಬಡಿದು ಕೆರಿಯಪ್ಪ ಕನ್ನ ನಾಯ್ಕ ಹಾಗೂ ಪ್ರಶಾಂತ ಕೆರಿಯಪ್ಪ ನಾಯ್ಕ ಇವರಿಗೆ ಸ್ವಲ್ಪ ಪ್ರಮಾಣದಲ್ಲಿ ಸಿಡಿಲು ಬಡಿದಿದೆ. ಇಬ್ಬರೂ ಚಿಕಿತ್ಸೆ ಪಡೆದುಕೊಂಡಿದ್ದರೆ ಮನೆಯಲ್ಲಿನ ವಿದ್ಯುತ್ ಉಪಕರಣಗಳು ಸುಟ್ಟುಹೋಗಿದ್ದು ಐವತ್ತು ಸಾವಿರ ರೂಗಳಷ್ಟು ಹಾನಿ ಸಂಭವಿಸಿದೆ.
ಬಿದ್ರಕಾನ ಗ್ರಾಪಂ ವ್ಯಾಪ್ತಿಯ ಅಗಳಗದ್ದೆಯ ಶೋಭಾ ಬಿಳಿಯಾ ಗೌಡ ಅವರ ಕೊಟ್ಟಿಗೆ ಮನೆಗೆ ಗುರುವಾರ ಬೆಳಗ್ಗೆ ಆಕಸ್ಮಿಕ ಬೆಂಕಿ ಬಿದ್ದು ಕೊಟ್ಟಿಗೆ ಮನೆ ಸಂಪೂರ್ಣ ಸುಟ್ಟು ಹೋಗಿದ್ದು ಅಂದಾಜು 20ಸಾವಿರ ರೂಗಳಷ್ಟು ಹಾನಿ ಸಂಭವಿಸಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 