ಬಾಳೇಸರ: ಮಳೆ, ಗಾಳಿಗೆ ಅಪಾರ ಹಾನಿ
ಲೋಕದರ್ಶನ ವರದಿ
ಸಿದ್ದಾಪುರ: ತಾಲೂಕಿನ ಬಾಳೇಸರದಲ್ಲಿ ಬುಧವಾರ ರಾತ್ರಿ ಬೀಸಿದ ಗಾಳಿಗೆ ಹಾಗೂ ಸುರಿದ ಮಳೆಗೆ ಬಿಎಸ್ಎನ್ಎಲ್ನ ಟವರ್, ಪೊವರ್ ಪ್ಲಾಂಟ್ನ ಮನೆಯ ಮೇಲ್ಚಾವಣಿ ಹಾರಿ ಹೋಗಿ ಉಪಕರಗಳು ಹಾನಿಗೊಂಡಿದೆ.
ಮೇಲ್ಚಾವಣಿ ಹಾರಿ ಹೋಗಿದ್ದರಿಂದ ಒಳಗಡೆ ನೀರು ತುಂಬಿಕೊಂಡಿದೆ. ಸ್ಥಿರ ದೂರವಾಣಿ ಹಾಗೂ ಮೊಬೈಲ್ ಟವರ್ ಸೇವೆ ಸ್ಥಗಿತಗೊಂಡಿದೆ.
ಈ ಕುರಿತು ಬಿಎಸ್ಎನ್ಲ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ಸ್ಥಿರ ಹಾಗೂ ಮೊಬೈಲ್ ಟವರ್ ಸರಿಪಡಿಸಿ ಗ್ರಾಹಕರಿಗೆ ಅನುಕೂಲಮಾಡಿಕೊಡುವಂತೆ ಬಾಳೇಸರ ಸುತ್ತಮುತ್ತಲಿನ ದೂರವಾಣಿ ಗ್ರಾಹಕರು ಆಗ್ರಹಿಸಿದ್ದಾರೆ.
ಬಿದ್ರಕಾನ ಗ್ರಾಪಂ ವ್ಯಾಪ್ತಿಯ ಮಣ್ಣಿಕೊಪ್ಪದ ಮಾದೇವ ಗೋವಿಂದ ನಾಯ್ಕ ಅವರ ಮನೆಯ ಮೇಲೆ ಮರವೊಂದು ಬಿದ್ದು ಭಾಗಶಃ ಮನೆ ಜಖಂಗೊಂಡಿದೆ. ಅಂದಾಜು 20ಸಾವಿರ ರೂ ಹಾನಿ ಸಂಭವಿಸಿದೆ.
ಇಟಗಿ ಸಮೀಪದ ಚಂದ್ರಘಟಗಿಯ ವಾಸ್ತವ್ಯದ ಮನೆಯೊಂದಕ್ಕೆ ಸಿಡಿಲು ಬಡಿದು ಕೆರಿಯಪ್ಪ ಕನ್ನ ನಾಯ್ಕ ಹಾಗೂ ಪ್ರಶಾಂತ ಕೆರಿಯಪ್ಪ ನಾಯ್ಕ ಇವರಿಗೆ ಸ್ವಲ್ಪ ಪ್ರಮಾಣದಲ್ಲಿ ಸಿಡಿಲು ಬಡಿದಿದೆ. ಇಬ್ಬರೂ ಚಿಕಿತ್ಸೆ ಪಡೆದುಕೊಂಡಿದ್ದರೆ ಮನೆಯಲ್ಲಿನ ವಿದ್ಯುತ್ ಉಪಕರಣಗಳು ಸುಟ್ಟುಹೋಗಿದ್ದು ಐವತ್ತು ಸಾವಿರ ರೂಗಳಷ್ಟು ಹಾನಿ ಸಂಭವಿಸಿದೆ.
ಬಿದ್ರಕಾನ ಗ್ರಾಪಂ ವ್ಯಾಪ್ತಿಯ ಅಗಳಗದ್ದೆಯ ಶೋಭಾ ಬಿಳಿಯಾ ಗೌಡ ಅವರ ಕೊಟ್ಟಿಗೆ ಮನೆಗೆ ಗುರುವಾರ ಬೆಳಗ್ಗೆ ಆಕಸ್ಮಿಕ ಬೆಂಕಿ ಬಿದ್ದು ಕೊಟ್ಟಿಗೆ ಮನೆ ಸಂಪೂರ್ಣ ಸುಟ್ಟು ಹೋಗಿದ್ದು ಅಂದಾಜು 20ಸಾವಿರ ರೂಗಳಷ್ಟು ಹಾನಿ ಸಂಭವಿಸಿದೆ.
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ 