ಪಿಒಪಿ ಗಣೇಶ ಮೂರ್ತಿಗಳ ನಿಷೇಧ! ಪಿಓಪಿ ಗಣೇಶ ಮೂರ್ತಿಗಳ ವಶಪಡಿಸಿಕೊಂಡ ಪರಿಸರ ಅಧಿಕಾರಿ!
Ban on POP Ganesh idols! Environment officer seizes POP Ganesh idols!
ಮಹಾಲಿಂಗಪುರ 21: ಪಟ್ಟಣದ ಹಲವೆಡೆ ಸುಮಾರು 15 ಕಡೆ ಪಿಓಪಿ ಗಣೇಶ ಮೂರ್ತಿಗಳನ್ನು ಪರಿಸರ ಅಧಿಕಾರಿಗಳು ವಶಪಡಿಸಿಕೊಂಡರು.
ಪುರಸಭೆ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಬಾಗಲಕೋಟ ಪರಿಸರ ಅಧಿಕಾರಿಗಳಾದ ಡಾ! ಅನಿಲಕುಮಾರ ಡಿ ತಳಕೇರಿ ಅವರ ನೇತೃತ್ವದಲ್ಲಿ ಪಟ್ಟಣದ ಅನೇಕ ಕಡೆ ಪಿಓಪಿ ಗಣೇಶ ಮೂರ್ತಿಗಳನ್ನು ಪರೀಶೀಲನೆ ಮಾಡಿದರು. ವಾಯುವ ಮಾಲಿನ್ಯ ಹಾಳಾಗುವಂತಹ ಹಲವು, ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡರು. ಪರಿಸರ ಹಾಳಾಗದಂತೆ ಸರ್ಕಾರ ಅನೇಕ ರೀತಿಯ ಕಟ್ಟುನಿಟ್ಟಿನ ಕ್ರಮ ತಂದರು ಸಹ ತಮ್ಮ ಲಾಭಕ್ಕೊಸ್ಕರ ಇಂತಹ ಕೃತ್ಯವನ್ನು ಮಾಡುವಂತಹ ವ್ಯಕ್ತಿಗಳನ್ನು ಕಂಡರೆ ಹಂತವರ ಮೇಲೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದೆಂದು ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ನಾಮದೇವ ಲಮಾಣಿ, ಹಿರಿಯ ಆರೋಗ್ಯ ನೀರೀಕ್ಷಕ ಎಂ ಎಂ ಮುಗಳಕೋಡ, ಕಿರಿಯ ಆರೋಗ್ಯ ನೀರೀಕ್ಷಕ ಮನೋಜ ಹಂಚಾಟಿ, ರಾಮು ಮಾಂಗ, ಮಹಾಲಿಂಗ ಮಾಂಗ, ವೀರೇಶ ಜಿಗೇರಿ ಪರೀಶೀಲಿನ ಸಮಯದಲ್ಲಿ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 