ಸಂಘದ ನಿಷೇಧ ಕನಸಿನ ಮಾತು: ಬಿರಾದಾರ
Ban on Sangh is a pipe dream: Biradar
ಲೋಕದರ್ಶನ ವರದಿ
ಸಂಘದ ನಿಷೇಧ ಕನಸಿನ ಮಾತು: ಬಿರಾದಾರ
ಸಿಂದಗಿ 13: ರಾಷ್ಟ್ರೀಯ ಸ್ವಯಂಸೇವಕ ಸಂಘದ ಇತಿಹಾಸ, ಹಿನ್ನೆಲೆ, ಅದರ ಕಾರ್ಯ ಚಟುವಟಿಕೆಯ ಮಾಹಿತಿ ಇಲ್ಲದೇ ಇದ್ದವರು ಪ್ರಚಾರದ ಗಿಳಿನಿಂದ ಇಂತಹ ಹೇಳಿಕೆ ನೀಡುತ್ತಾರೆ. ಪ್ರಿಯಾಂಕ್ ಖರ್ಗೆ ಅವರ ಕಣ್ಣು ಸಿಎಂ ಗದ್ದುಗೆಯ ಮೇಲೆ ಇರುವಂತೆ ಗೋಚರಿಸುತ್ತದೆ. ಹಾಗಾಗಿ ಹೈಕಮಾಂಡ್ ಮತ್ತು ಗಾಂಧಿ ಕುಟುಂಬವನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ಈ ರೀತಿಯ ಪತ್ರ ಬರೆದಂತೆ ಎದ್ದು ಕಾಣುತ್ತಿದೆ ಎಂದು ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಆರ್ಎಸ್ಎಸ್ 100 ವರ್ಷ ಪೂರೈಸಿದ ಈ ಶುಭ ಘಳಿಗೆಯಲ್ಲಿ ದೇಶದಾದ್ಯಂತ ಪಥ ಸಂಚಲನದ ಮೂಲಕ ಮತ್ತಷ್ಟು ದೇಶವನ್ನು ಜಾಗೃತವಾಗುವಂತೆ ಮಾಡುತ್ತಿದೆ. ಒಂದು ಜವಾಬ್ದಾರಿಯುತ ಸ್ಥಾನದಲ್ಲಿರುವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ ಚಟುವಟಿಕೆಯ ನಿಷೇಧದ ಕುರಿತು ಇಷ್ಟೊಂದು ಬೇಜವಾಬ್ದಾರಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದರೆ ಇದು ಅವರ ಮೂರ್ಖತನದ ಪ್ರದರ್ಶನ ಎಂದು ಕಿಡಿಕಾರಿದ್ದಾರೆ. ಸಚಿವರಾಗಿ ರಾಜ್ಯ ಸರಕಾರವನ್ನು ಮುಜುಗರಕ್ಕೆ ತರುವಂತಹ ಕಾರ್ಯ ಮಾಡುವ ಮತ್ತು ಉಡಾಫೆಯಾಗಿ ಮಾತನಾಡುತ್ತಿರುವುದಕ್ಕೆ ಕಾಲವೇ ಉತ್ತರ ಕೊಡಲಿದೆ. ಸಂಘವನ್ನು ಯಾರಿಂದಲೂ ನಿಷೇಧ ಮಾಡಲು ಸಾಧ್ಯವಿಲ್ಲ. ಸಂಘದ ನಿಷೇಧ ಕನಸಿನ ಮಾತು ಎಂದಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 