ಬೆಂಗಳೂರು 24: ಇಲಾಖಾ ಪರೀಕ್ಷೆಗೆ ಮೇಲಾಧಿಕಾರಿಯಿಂದ ಅನುಮತಿ ಪತ್ರ ಬೇಡ: ಕೆಪಿಎಸ್ ಸಿ ಆದೇಶ
ಬೆಂಗಳೂರು 24: ಲೋಕಸೇವಾ ಆಯೋಗ 2020ನೇ ಸಾಲಿನ ಪ್ರಥಮ ಇಲಾಖಾ ಪರೀಕ್ಷೆಗೆ ಮೇಲಾಧಿಕಾರಿಯಿಂದ ಅನುಮತಿ ಪತ್ರ (ಎನ್ ಒಸಿ) ಪಡೆಯುವ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ.
2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಡಿಸೆಂಬರ್ 2019ರ ಅಧಿಸೂಚನೆಯಲ್ಲಿ ನೌಕರರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ತಮ್ಮ ಕಚೇರಿಯ ಮೇಲಾಧಿಕಾರಿಯಿಂದ ಎನ್ ಒಸಿ ಪಡೆಯುವುದು,ಮೇಲಾಧಿ ಕಾರಿ ಯಿಂದ ಲಿಖಿತ ಅನುಮತಿ ಪಡೆದು, ಆನ್ಲೈನ್ ಅರ್ಜಿಯೊಂದಿಗೆ ಅಪ್ಲೋಡ್ ಮಾಡುವುದು ಕಡ್ಡಾಯವಾಗಿತ್ತು.
ಇದೀಗ ಲೋಕಸೇವಾ ಆಯೋಗ ಈ ನಿಯಮವನ್ನು ಸಡಿಲಗೊಳಿಸಿದೆ.ಇಲಾಖಾ ಪರೀಕ್ಷಾ ರ್ಥಿ ನೌಕರರು ಮೇಲಾಧಿಕಾರಿಯಿಂದ ಎನ್ ಒಸಿ ಹಾಗೂ ಲಿಖಿತ ಅನುಮತಿ ಪತ್ರ ಪಡೆ ಯುವುದನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.ಹೀಗಾಗಿ ಪರೀಕ್ಷಾರ್ಥಿಗಳು ಅರ್ಜಿ ಸಲ್ಲಿಸುವಾಗ ತಮ್ಮ ಇಲಾಖೆಯ ಮೇಲಾಧಿಕಾರಿಗಳ ಅನುಮತಿ ಪಡೆಯುವ ಅಗತ್ಯ ಇಲ್ಲ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 