ಬಂಧಿತ ಕಾಶ್ಮೀರಿ ವಿದ್ಯಾರ್ಥಿಗಳನ್ನು ಭೇಟಿಯಾದ ಬೆಂಗಳೂರು ವಕೀಲರು
ಬೆಳಗಾವಿ, ಫೆ 28 : ಬೆಂಗಳೂರು ವಕೀಲರ ಸಂಘದ ವಕೀಲರು ಶುಕ್ರವಾರ, ದೇಶದ್ರೋಹ ಪ್ರಕರಣದಲ್ಲಿ ಹಿಂಡಲಗಾ ಜೈಲಿನಲ್ಲಿರುವ ಕಾಶ್ಮೀರದ ಮೂರು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಭೇಟಿ ಮಾಡಿದರು.
ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ 'ಪಾಕಿಸ್ತಾನ ಜಿಂದಾಬಾದ್ ' ಎಂದು ಘೋಷಣೆಯನ್ನೊಳಗೊಂಡ ವಿಡಿಯೋವನ್ನು ಹರಿಬಿಟ್ಟಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳನ್ನು ಅಮಿರ್, ನಾಸಿರ್ ಹಾಗೂ ತಾಲಿಬ್ ಎಂದು ಗುರುತಿಸಲಾಗಿದೆ.
ವಕೀಲರು ಬಂಧಿತರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ಹೈಕೋರ್ಟ್, ಬಂಧಿತರ ಪರ ವಾದ ಮಂಡಿಸಲು ನಿರಾಕರಿಸಿದ ಹುಬ್ಬಳ್ಳಿ-ಧಾರವಾಡ ವಕೀಲರ ಸಂಘದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತ್ತು. ನಂತರ, ಸಂಘ ಈ ನಿರ್ಣಯವನ್ನು ಹಿಂಪಡೆದಿತ್ತು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 