ಬ್ಯಾಂಕ್ ಗಳು ಕೃಷಿ ಅಭಿವೃದ್ಧಿಗೆ ಹೆಚ್ಚಿನ ನೆರವು ನೀಡುತ್ತಿವೆ: ಕೃಷ್ಣಯ್ಯ

Banks are providing more assistance for agricultural development: Krishnaiah

ಇಂಡಿ 12: ಭಾರತೀಯ ಸ್ಟೇಟ್ ಬ್ಯಾಂಕ್ ವಿಜಯಪೂರ ಹಾಗೂ ಇಂಡಿ ಶಾಖೆಯ ಸಹಯೋಗದಲ್ಲಿ ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದ (ಜೋಡಿಗುಡಿಯ  ಮರುಳಸಿದ್ದಶ್ವರ ದೇವಾಲಯ ಆವರಣದಲ್ಲಿ) ರೈತರ ಸಂಧ್ಯಾ ಶಿಬಿರ ಕಾರ್ಯಕ್ರಮ ಜರುಗಿತು.  

ಈ ಕಾರ್ಯಕ್ರಮವನ್ನು ವಿಜಯಪೂರ ಭಾರತೀಯ ಸ್ಟೇಟ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕರಾದ ಕೃಷ್ಣಯ್ಯ ಅವರು ಉದ್ಘಾಟಿಸಿ  ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು  ಬ್ಯಾಂಕ್ ಗಳು ಜನ ಸ್ನೇಹಿ,ರೈತ ಸ್ನೇಹಿ ಉದ್ದೇಶಗಳಿಂದ ಕೃಷಿ ಅಭಿವೃದ್ಧಿಗೆ ಹೆಚ್ಚಿನ ನೆರವು ನೀಡುತ್ತಿವೆ ಹಾಗಾಗಿ ನಮ್ಮ ದೇಶದ ಕೃಷಿ ಅಭಿವೃದ್ಧಿಗೆ ಎಸ್ ಬಿ ಐ ಬ್ಯಾಂಕ್ ಅನೇಕ ರೈತಪರ ಯೋಜನೆಗಳನ್ನು ಹಮ್ಮಿಕೊಂಡು ಜನರ ವಿಶ್ವಾಸ ಗಳಿಸಿದೆ, ಕೃಷಿ ಸಾಲಗಳ ಬಗ್ಗೆ ಮಾತನಾಡಿದ ಅವರು ಕೃಷಿಡೈರಿ, ಕುರಿ ಸಾಕಾಣಿಕೆ, ಟ್ರಾಕ್ಟರ್ ಸಾಲ, ಬೆಳೆಸಾಲ ಮತ್ತು ದೈನಂದಿನ ವ್ಯವಹಾರಗಳ ಮೆಲೆ ಸಾಲ ಸೌಲಭ್ಯ ನೀಡುತ್ತಿದ್ದೇವೆ ಎಂದು ರೈತರಿಗೆ ಮಾಹಿತಿ ನೀಡಿವುದರ ಮೂಲಕ ಅದರ ಸದುಪಯೋಗ ಪ್ರತಿಯೊಬ್ಬರು ಪಡೆದು ತಮ್ಮ ಆಧಾಯವನ್ನ ದ್ವೀಗುಣ ಮಾಡಿಕೊಳ್ಳಬೇಕೆಂದು ಎಂದು ಹೇಳಿದರು.  

ವಿಜಯಪೂರ ಎಸ್ ಬಿ ಐ ಶಾಖೆಯ ಉಪ ಪ್ರಬಂಧಕರಾದ ಸವಿತಾ ಪಾಟೀಲ ಅವರು ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ತಮ್ಮ ಜವಬ್ದಾರಿಯನ್ನು ನಿಬಾಯಿಸಲು ಹಾಗೂ ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಲು ಹೆಚ್ಚಿನ ವಿದ್ಯಾಬ್ಯಾಸಕ್ಕಾಗಿ ನಾಲ್ಕು ಲಕ್ಷದಿಂದ ಇಪ್ಪತ್ತು ಲಕ್ಷದ ವರೆಗೆ ಸಾಲ ಸೌಲಭ್ಯ ಇದೆ.ಇದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ರೈತರು ಬ್ಯಾಂಕ್ ನಿಂದ ಸಾಲ ಪಡೆದು ಸಹಕಾಲದಲ್ಲಿ ತುಂಬಿ ಮತ್ತೆ ಸಾಲ ಪಡೆಯಬಹುದು ಇದರಿಂದ ರೈತರು ತಮ್ಮ ಆದಾಯವನ್ನು ದ್ವೀಗುಣ ಮಾಡಿಕೊಂಡು ಸ್ವಾವಲಂಬಿ ಜೀವನ ಮಾಡಬಹುದು ಹಾಗೂ ಸ್ಟಾಂಪ್ ಇಂಡಿಯಾ ಯೋಜನೆ 10 ಲಕ್ಷದಿಂದ ಒಂದು ಕೋಟಿಯವರೆಗೆ ಎಸ್ ಸಿ,ಎಸ್ಟಿ, ಮತ್ತು ಮಹಿಳೆಯರು ಉಧ್ಯಮಿಗಳಾಗಬಹುದು ಎಂದು ತಿಳಿಸಿದರು.ನಂತರ ಮಾತನಾಡಿದ ಭರತೇಶ ಉಪಾಧ್ಯೆ ಅವರು ಪ್ರಧಾನ ಮಂತ್ರಿಗಳ ಸಾಮಾಜಿಕ ಭದ್ರತಾ ಯೋಜನೆಯಡಿಯಲ್ಲಿ ಖಾತೆ ಪ್ರಾರಂಭಿಸಿ ಅದರ ಸದುಪಯೋಗ ಪಡೆದುಕೊಂಡ  ಮತ್ತು (ಪಿಎಂಜೆಜೆಬಿವೈ/ಎಸ್ ಬಿ ವೈ) ಅಪಘಾತದಲ್ಲಿ ಮರಣ ಹೊಂದಿದರು. 

 ಈ ಸಂದರ್ಭದಲ್ಲಿ ಖಾತೆಯ ವಾರಸುದಾರರಿಗೆ ನಾಲ್ಕು ಲಕ್ಷ ರುಪಾಯಿ ವಿಮಾ ಸೌಲಭ್ಯವನ್ನು ಅವರಿಗೆ ದೊರಕಿಸಲಾಯಿತು. ಸಾಮಾಜಿಕ ಭದ್ರತಾ ಯೋಜನೆಗಳಾದ ಕಒಎಎಃಙ,ಕಒಖಃಙ ಅಟಲ್ ಪೆನ್ಷನ್ ಯೋಜನೆ ಹಾಗೂ ಅಫಘಾತ ಮತ್ತು ಸಾಮಾನ್ಯ ಮರಣ ಹೊಂದಿದಲ್ಲಿ ಕಡಿಮೆ ವಿಮೆಯಲ್ಲಿ ಹೆಚ್ಚಿನ ಭದ್ರತೆಯೊಂದಿರುವ ಭಾರತೀಯ ಸ್ಟೇಟ ಬ್ಯಾಂಕ್ ನೀಡುತ್ತಿರುವ ಸೋಸಿಯಲ್ ಸೆಕ್ಯೂರಿಟಿ ಸ್ಕೀಮ್ ಗಳ ಬಗ್ಗೆ ಪ್ರದಾನ ಮಂತ್ರಿ ಜೀವನ ಜ್ಯೋತಿ,ಪ್ರಧಾನ ಮಂತ್ರಿ ಜೀವನ ಸುರಕ್ಷ ಹಾಗೂ ಅಟಲ್ ಪೆನ್ಷನ್ ಯೋಜನೆಗಳ ಬಗ್ಗೆ ಮನ ಮುಟ್ಟುವಂತೆ ರೈತಬಾಂಧವರಿಗೆ ಹಾಗೂ ಗ್ರಾಮದ ಸಾರ್ವಜನಿಕರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಇಂಡಿ ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಯ ಮುಖ್ಯ ವ್ಯವಸ್ಥಾಪಕರಾದ ಸುನೀಲ ಪರಿಮಳ,ವಿಜಯಪೂರ ಶಾಖೆ ವ್ಯವಸ್ಥಾಪಕರಾದ ಪಿ ಎಸ್ ಲಮಾಣಿ, ಇಂಡಿ ಶಾಖೆಯ ಕಿರಿಯ  

ವ್ಯವಸ್ಥಾಪಕರಾದ ಪ್ರಕಾಶ್ ಗುಜ್ಜಲಕರ, ತಡವಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸುನಂದಾ ವಾಲಿಕಾರ,ರೈತ ಮುಖಂಡರಾದ ಭೀಮರಾಯ ಹಿರಾಪೂರೆ, ಸಿದ್ದು ಸಾಹುಕಾರ ಮೇತ್ರಿ, ಗಂಗಪ್ಪ ಅಹಿರಸಂಗ, ಹಾಗೂ ರೈತರು ಮತ್ತು ಬ್ಯಾಂಕ್ ಸಿಬ್ಬಂದಿ ವರ್ಗ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.