ಗರ್ಭಿಣಿ ಮೇಲೆ ಉರುಳಿದ ಆಲದ ಮರ: ಮಹಿಳೆ ಸಾವು
Banyan tree falls on pregnant woman: Woman is dead
ಕಾರವಾರ 08: ಯಲ್ಲಾಪುರ ತಾಲೂಕಿನ ಡೊಮಗೇರಿ ಬಳಿಯ ಕಿರವತ್ತಿಯಲ್ಲಿ ಅಂಗನವಾಡಿ ಸಮೀಪದಲ್ಲಿ ಆಲದಮರ ನೆಲಕ್ಕುರುಳಿದ ಪರಿಣಾಮ ಗರ್ಭಿಣಿ ಮಹಿಳೆ ಸಾವನ್ನಪ್ಪಿದ ದುರ್ಘಟನೆ ಇಂದು ನಡೆದಿದೆ. ಈ ಘಟನೆಯಲ್ಲಿ ಮಕ್ಕಳು , ಯುವತಿ ಸೇರಿದಂತೆ ಏಳು ಜನ ಗಾಯಗೊಂಡಿದ್ದಾರೆ.ಐದು ತಿಂಗಳ ಗರ್ಭಿಣಿ ಮಹಿಳೆಸಾವಿತ್ರಿ ಬಾಬು ಖರಾತ್ (28), ಸಾವನ್ನಪ್ಪಿದ್ದಾಳೆ.
ಘಟನೆಯಲ್ಲಿ ಸ್ವಾತಿ ಬಾಬು ಖರಾತ್ (17), ಘಾಟು ಲಕ್ಕು ಕೊಕರೆ (5), ಶ್ರಾವಣಿ ಬಾಬು ಖರಾತ್ (2), ಶಾಂಭವಿ ಬಾಬು ಖರಾತ್ (4) ಗಂಭೀರವಾಗಿ ಗಾಯವಾಗಿದ್ದರೇ ಸಾನ್ವಿ ಬಾಬು ಕೊಕರೆ (5), ವಿನಯ ಲಕ್ಕು ಕೊಕರೆ (5) ಮತ್ತು ಅನುಶ್ರೀ ಮಾಂಬು ಕೊಕರೆ (5) ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ
.ಸಾವಿತ್ರಿ ಬಾಬು ಖರಾತ್ ರವರು ಅಂಗನವಾಡಿಯಿಂದ ಮನೆಗೆ ಮರಳುತ್ತಿದ್ದ ವೇಳೆ, ದಾರಿಯಲ್ಲಿದ್ದ ಆಲದ ಮರ ದಿಢೀರ್ ನೆಲಕ್ಕುರುಳಿತು. ಮರದ ಅಡಿ ಸಿಲುಕಿದ ಸಾವಿತ್ರಿ ದಾರುಣ ಸಾವು ಕಂಡರು. ಅಂಗನವಾಡಿ ಯಿಂದ ಮನೆಗೆ ಮರಳುತ್ತಿದ್ದ ಯುವತಿ , ಮಕ್ಕಳು ಬಿದ್ದ ಆಲದ ಮರದ ಟೊಂಗೆ ಅಡಿ ಸಿಲುಕಿದರು. ಗಂಭೀರವಾಗಿ ಗಾಯಗೊಂಡವರನ್ನು ಹುಬ್ಬಳ್ಳಿ ಕಿಮ್ಸ ಆಸ್ಪತ್ರೆಗೆ ಕಳುಹಿಸಲಾಗಿದೆ. ಉಳಿದ ಗಾಯಾಳು ಗಳಿಗೆ ಯಲ್ಲಾಪುರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಆಲದ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಸಹ ತುಂಡಾಗಿ ನೆಲಕ್ಕುರುಳಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 