ಪೆಹಲ್ಗಾಮ್ ಹೀನ ಕೃತ್ಯ ಖಂಡಿಸಿ ಬಾರ್ ಅಸೋಶಿಯೇಶನ್ ಮನವಿ
Bar Association appeals to condemn Pahalgam atrocities
ಪೆಹಲ್ಗಾಮ್ ಹೀನ ಕೃತ್ಯ ಖಂಡಿಸಿ ಬಾರ್ ಅಸೋಶಿಯೇಶನ್ ಮನವಿ
ಬೆಳಗಾವಿ 24: ಜಮ್ಮು ಕಾಶ್ಮೀರ ಪೆಹಲ್ಗಾಮ್ನಲ್ಲಿ ಭಯೋತ್ಪಾದಕರ ಹಿಂದೂ ಪ್ರವಾಸಿಗರ ನರಸಂಹಾರ ತೀವ್ರವಾಗಿ ಖಂಡಿಸಿ ಬೆಳಗಾವಿ ಬಾರ್ ಅಸೋಶಿಯೇಶನ್ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ನರೇಂದ್ರ ಮೋದಿಜಿಯವರಿಗೆ ಮನವಿ ಸಲ್ಲಿಸಿದರು.
ಈ ಕೃತ್ಯ ಮಾಡಿದ ಮಾನವೀಯತೆಯ ವಿರೋಧಿಗಳ ಮೇಲೆ ಪ್ರತಿಕಾರ ತೀರಿಸಿಕೊಳ್ಳಬೇಕು. ಶಾಂತಿ ನೆಲೆಸಿದ ಜಮ್ಮು ಕಾಶ್ಮೀರದಲ್ಲಿ ಮತ್ತೇ ಅಶಾಂತಿ ಉಂಟು ಮಾಡಲು ದೇಶದ ಸೌಹಾರ್ದತೆಯನ್ನು ಕದಡಲು ಹವಣಿಸುತ್ತಿರುವ ದುಷ್ಟ ಶಕ್ತಿಗಳನ್ನು ಸಂಪೂರ್ಣ ನಿರ್ನಾಮ ಮಾಡಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.
ದೇಶ ಹಿತಕ್ಕಾಗಿ, ಅಮಾಯಕ ಹಿಂದೂ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆಸಿರುವ ದಾಳಿ ಹೇಯ ಕೃತ್ಯ. ಈ ಘಟನೆಯಲ್ಲಿ ಮಡಿದವರ, ಅವರ ಕುಟುಂಬದವರೊಂದಿಗೆ ನಾವಿದ್ದೇವೆ. ಸರ್ಕಾರ ಕೈಗೊಳ್ಳುವ ಕ್ರಮಕ್ಕೆ ನಮ್ಮ ಸಂಪೂರ್ಣ ಬೆಂಬಲವಿರಲಿದೆ ಎಂದು ಬಾರ್ ಅಸೋಶಿಯೇಶನ್ ಮನವಿಯಲ್ಲಿ ತಿಳಿಸಿದೆ.
ಬಾರ್ ಅಸೋಶಿಯೇಶನ್ ಅಧ್ಯಕ್ಷ ಕಿವಡಸಣ್ಣವರ, ಜ. ಸೆಕ್ರೆಟರಿ ವಾಯ್. ಕೆ.ದಿವಟೆ ಸೇರಿದಂತೆ ಅಸೋಶಿಯೇಶನ್ ಪದಾಧಿಕಾರಿಗಳು ನ್ಯಾಯವಾದಿಗಳು ಉಪಸ್ಥಿತರಿದ್ದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 