ಪೆಹಲ್ಗಾಮ್ ಹೀನ ಕೃತ್ಯ ಖಂಡಿಸಿ ಬಾರ್ ಅಸೋಶಿಯೇಶನ್ ಮನವಿ
Bar Association appeals to condemn Pahalgam atrocities
ಪೆಹಲ್ಗಾಮ್ ಹೀನ ಕೃತ್ಯ ಖಂಡಿಸಿ ಬಾರ್ ಅಸೋಶಿಯೇಶನ್ ಮನವಿ
ಬೆಳಗಾವಿ 24: ಜಮ್ಮು ಕಾಶ್ಮೀರ ಪೆಹಲ್ಗಾಮ್ನಲ್ಲಿ ಭಯೋತ್ಪಾದಕರ ಹಿಂದೂ ಪ್ರವಾಸಿಗರ ನರಸಂಹಾರ ತೀವ್ರವಾಗಿ ಖಂಡಿಸಿ ಬೆಳಗಾವಿ ಬಾರ್ ಅಸೋಶಿಯೇಶನ್ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ನರೇಂದ್ರ ಮೋದಿಜಿಯವರಿಗೆ ಮನವಿ ಸಲ್ಲಿಸಿದರು.
ಈ ಕೃತ್ಯ ಮಾಡಿದ ಮಾನವೀಯತೆಯ ವಿರೋಧಿಗಳ ಮೇಲೆ ಪ್ರತಿಕಾರ ತೀರಿಸಿಕೊಳ್ಳಬೇಕು. ಶಾಂತಿ ನೆಲೆಸಿದ ಜಮ್ಮು ಕಾಶ್ಮೀರದಲ್ಲಿ ಮತ್ತೇ ಅಶಾಂತಿ ಉಂಟು ಮಾಡಲು ದೇಶದ ಸೌಹಾರ್ದತೆಯನ್ನು ಕದಡಲು ಹವಣಿಸುತ್ತಿರುವ ದುಷ್ಟ ಶಕ್ತಿಗಳನ್ನು ಸಂಪೂರ್ಣ ನಿರ್ನಾಮ ಮಾಡಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.
ದೇಶ ಹಿತಕ್ಕಾಗಿ, ಅಮಾಯಕ ಹಿಂದೂ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆಸಿರುವ ದಾಳಿ ಹೇಯ ಕೃತ್ಯ. ಈ ಘಟನೆಯಲ್ಲಿ ಮಡಿದವರ, ಅವರ ಕುಟುಂಬದವರೊಂದಿಗೆ ನಾವಿದ್ದೇವೆ. ಸರ್ಕಾರ ಕೈಗೊಳ್ಳುವ ಕ್ರಮಕ್ಕೆ ನಮ್ಮ ಸಂಪೂರ್ಣ ಬೆಂಬಲವಿರಲಿದೆ ಎಂದು ಬಾರ್ ಅಸೋಶಿಯೇಶನ್ ಮನವಿಯಲ್ಲಿ ತಿಳಿಸಿದೆ.
ಬಾರ್ ಅಸೋಶಿಯೇಶನ್ ಅಧ್ಯಕ್ಷ ಕಿವಡಸಣ್ಣವರ, ಜ. ಸೆಕ್ರೆಟರಿ ವಾಯ್. ಕೆ.ದಿವಟೆ ಸೇರಿದಂತೆ ಅಸೋಶಿಯೇಶನ್ ಪದಾಧಿಕಾರಿಗಳು ನ್ಯಾಯವಾದಿಗಳು ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 