ಕಾರ್ಮಿಕನ ಬರ್ಬರ ಹತ್ಯೆ
ಬೆಂಗಳೂರು, ಫೆ. 26 : ಕೂಲಿ ಕಾರ್ಮಿಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಕೆ.ಆರ್. ಮಾರ್ಕೆಟ್ ಬಳಿಯ ಈಸ್ಟ್ ಗೇಟ್ನಲ್ಲಿ ನಡೆದಿದೆ.
24 ವರ್ಷದ ರಮೇಶ್ ಕೊಲೆಯಾದ ಕಾರ್ಮಿಕ.
ಈತ ಕಳೆದ ಮೂರು ನಾಲ್ಕು ವರ್ಷಗಳಿಂದ ಮಾರ್ಕೆಟ್ನಲ್ಲಿ ಮೂಟೆ ಹೊರುತ್ತಿದ್ದನು ಎನ್ನಲಾಗಿದೆ.
ಮಂಗಳವಾರ ರಾತ್ರಿ ಮಾರ್ಕೆಟ್ ಬಳಿ ಆತ ನಿಂತಿದ್ದಾಗ ಏಕಾಏಕೀ ಬಂದ ದುಷ್ಕರ್ಮಿಗಳು ಗುಂಪೊಂದು ಆತನ ಎದೆ, ಕತ್ತಿನ ಭಾಗವನ್ನು ಕೊಯ್ದಿದ್ದು, ಘಟನಾ ಸ್ಥಳದಲ್ಲಿ ಕಾರ್ಮಿಕ ರಮೇಶ್ ಮೃತಪಟ್ಟಿದ್ದಾನೆ.
ಕೃತ್ಯ ಎಸಗಿದ ನಂತರ ದುಷ್ಕರ್ಮಿಗಳು ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ. ಹಳೇಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನೆಗೆ ಸಂಬಂಧಿಸಿಂದತೆ ಕೆಆರ್ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 