ಬಸಪ್ಪ ವಿ. ಭೂಮರಡ್ಡಿ ಅವರ 140ನೇ ಜಯಂತಿ
Basappa V. Bhumaraddy's 140th birth anniversary
ಹುಬ್ಬಳ್ಳಿ 11: ಉತ್ತರ ಕರ್ನಾಟಕ ಭಾಗದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಉದಾರ ದೇಣಿಗೆ ನೀಡಿದ ಬಸವಾದಿ ಶರಣರ ದಾಸೋಹ ಪರಂಪರೆಯನ್ನು ಅಳವಡಿಸಿಕೊಂಡಿದ್ದ ಶಿಕ್ಷಣ ದಾಸೋಹಿ ಶ್ರೀ ಬಸಪ್ಪ ವಿ. ಭೂಮರಡ್ಡಿ ಅವರ 140ನೇ ಜಯಂತಿ ನಿಮಿತ್ತ ಕೆ.ಎಲ್.ಇ ಸಂಸ್ಥೆಯ ಬಿ.ವಿ.ಭೂಮರಡ್ಡಿ ಮಹಾವಿದ್ಯಾಲಯದ ಆವರಣದಲ್ಲಿರುವ, ಶಿಕ್ಷಣ ಪ್ರೇಮಿಗಳು, ಶ್ರೇಷ್ಟ ದಾನಿಗಳು, ಖ್ಯಾತ ಆಯಿಲ್ ಕಿಂಗ್ ಎಂದೆ ಹೆಸರಾಗಿದ್ದ, ಉದ್ದಮಿಗಳು, ಪರಮಪೂಜ್ಯರಾದ ಶ್ರೀ ಬಸಪ್ಪ ವಿ. ಭೂಮರಡ್ಡಿ ಅವರ ಆತ್ಯಾಕರ್ಷಕವಾದ ಕಂಚಿನ ಪುತ್ಥಳಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ವತಿಯಿಂದ ಪುಷ್ಪಾರ್ಪಣೆ ಮಾಡುವ ಮೂಲಕ ಗೌರವ ಅರ್ಪಣೆ ಮಾಡಿ, ನಮನಗಳನ್ನು ಸಲ್ಲಿಸಲಾಯಿತು.
ಬಸಪ್ಪ ವಿ. ಭೂಮರಡ್ಡಿ ಅವರು ಮಾಡಿದ ಸೇವಾ ಕಾರ್ಯಗಳನ್ನು ಸ್ಮರಿಸಲಾಯಿತು. ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಗಣ್ಯರು, ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 