ಪತ್ರಕರ್ತ ಸಿಂಗೇಗೋಳಗೆ ಬಸವ ಚೇತನ ಪ್ರಶಸ್ತಿ: ಸಂತಸ ವ್ಯಕ್ತಪಡಿಸಿದ ಕಿವಡೆ
Basava Chetana award for journalist Singegola
ಇಂಡಿ 09: ಪತ್ರಿಕಾ ರಂಗದಲ್ಲಿ ಅನುಪಮವಾದ ಸೇವೆ ಸಲ್ಲಿಸುತ್ತಿರುವ ಈ ಭಾಗದ ಯುವ ನೇತಾರ ಪತ್ರಕರ್ತ ಮಿತ್ರ ಖಾಜು ಸಿಂಗೇಗೋಳ ಅವರಿಗೆ ರಾಜ್ಯ ಮಟ್ಟದ ಬಸವ ಚೇತನ ನೀಡಿ ಗೌರವಿಸಿದ್ದು ನಮಗೆಲ್ಲರಿಗೂ ಸಂತಸ ತಂದಿದೆ ಎಂದು ಇಂಡಿ ಮಂಡಲ ಬಿಜೆಪಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಕಿವಡೆ ಹೇಳಿದ್ದಾರೆ.
ವಿಜಯಪುರದ ಅಮ್ಮಾ ಫೌಂಡೇಷನ್ ಎಲೆ ಮರಿಯ ಕಾಯಿಯಂತೆ ದಶಕದಿಂದ ವರದಿಗಾರರಾಗಿ ಪ್ರಸ್ತುತ ಪ್ರಧಾನ ಸಂಪಾದಕರಾಗಿ ಮಾಧ್ಯಮ ಕ್ಷೇತ್ರದಲ್ಲಿ ದಕ್ಷ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಖಾಜು ಸಿಂಗೇಗೋಳ ಅವರ ಕಾರ್ಯವೈಖರಿ ಗುರುತಿಸಿ ರಾಜ್ಯ ಮಟ್ಟದ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಗಳು ಉಳ್ಳವರ ಪಾಲಾಗುತ್ತಿರುವ ಇಂದಿನ ಕಾಲದಲ್ಲಿ ಸಾದಾ ಸರಳ ವ್ಯಕ್ತಿತ್ವದ ಶ್ರಮಜೀವಿ ಖಾಜು ಸಿಂಗೆಗೋಳ ಅವರ ಆಯ್ಕೆಯಿಂದ ಪ್ರಶಸ್ತಿಯ ಗೌರವ ಹೆಚ್ಚಿದಂತಾಗಿದೆ ಅಂದರೆ ಅತಿಶೋಕ್ತಿಯಲ್ಲ. ಬಡತನದಲ್ಲಿ ಹುಟ್ಟಿ ಬೆಳೆದು ನಿಸ್ಪಕ್ಷಪಾತ ಕಾರ್ಯ, ಶ್ರದ್ಧೆ, ಪ್ರಾಮಾಣಿಕತೆ ಆಸ್ತಿ ಮಾಡಿಕೊಂಡು ಈ ಭಾಗದ ಮಾದರಿ ಪತ್ರಕರ್ತರು ಎನಿಸಿಕೊಂಡಿದ್ದಾರೆ.
ಪ್ರತಿಭಾವಂತ ಕ್ರಿಯಾಶೀಲ ಯುವ ಪತ್ರಕರ್ತ ಸಿಂಗೇಗೊಳ್ ಅವರಿಗೆ ಮತ್ತಷ್ಟು ಪ್ರಶಸ್ತಿಗಳು ಅವರನ್ನು ಹುಡುಕಿ ಬರಲಿ ಮಾಧ್ಯಮ ರಂಗದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂಬುದು ನಮ್ಮೆಲ್ಲರ ಆಶಾ ಆಗಿದೆ ಎಂದು ಮಲ್ಲಿಕಾರ್ಜುನ ಕಿವಡೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 