ಸೆ. 1ರಂದು ಬಸವ ಸಂಸ್ಕೃತಿ ಅಭಿಯಾನ
Basava Culture Campaign on Sept. 1
ಸಿಂದಗಿ 26: ಸಪ್ಟೆಂಬರ್ 1ರಂದು ಬಸವನಬಾಗೇವಾಡಿಯಲ್ಲಿ ಸಾಂಸ್ಕೃತಿಕ ನಾಯಕ ಸ್ತ್ರೀ, ಪಥಿತ, ದೀನ-ದಲಿತ ಕುಲೋದ್ಧಾರಕ, ಇಷ್ಟಲಿಂಗ ಜನಕ, ಲಿಂಗಾಯತ ಧರ್ಮಗುರು, ವಿಶ್ವದ ಮೊದಲ ಪ್ರಜಾಪ್ರಭುತ್ವದ ಜನಕ, ಜಗಜ್ಯೋತಿ ಬಸವಣ್ಣನವರ ಬಸವ ಸಂಸ್ಕೃತಿ ಅಭಿಯಾನವನ್ನು ಲಿಂಗಾಯತ ಪೀಠಾಧೀಪತಿಗಳ ಒಕ್ಕೂಟ ಹಾಗೂ ಬಸವ ಪರ ಎಲ್ಲಾ ಸಂಘಟನೆಗಳಿಂದ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಈ ಅವಿಸ್ಮರಣೀಯ ಮತ್ತು ಅಭೂತಪೂರ್ವ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಸವ ಕೃಪೆಗೆ ಪಾತ್ರರಾಗಬೇಕೆಂದು ವಿಜಯಪುರ ಜಾಗತಿಕ ಲಿಂಗಾಯತ ಮಹಾಸಭಾ ಮತ್ತು ಎಲ್ಲಾ ಬಸವಪರ ಸಂಘಟನೆಗಳ ಪರವಾಗಿ ಅಂಬಿಕಾ ಪಾಟೀಲ ಮಾರ್ಸನಳ್ಳಿ ವಿನಂತಿಸಿದ್ದಾರೆ.
ಕಾರ್ಯಕ್ರಮಕ್ಕೆ ಆಗಮಿಸಲು ಇಚ್ಛಿಸುವ ಸರ್ವರು, ಮಹಿಳೆಯರು- ಇಳಕಲ ಸೀರೆಯನ್ನು ಧರಿಸಬೇಕು. ಪುರುಷರು-ನೆಹರು ಶರ್ಟ, ಗಾಂಧಿ ಟೊಪ್ಪಿಗೆ, ಬಿಳಿ ಲುಂಗಿ/ಪೈಜಾಮಾ ಅಥವಾ ಧೋತಿಯನ್ನು ಧರಸಿ ಬರಬೇಕು. ಈ ಮೇಲೆ ತಿಳಿಸಿದ ಉಡುಗೆಳನ್ನು ಧರಿಸಿ ಸಾಂಸ್ಕೃತಿಕ ಅಭಿಯಾನಕ್ಕೆ ಶೋಭೆ ತರಬೇಕೆಂದು ಅಲ್ಲದೆ ದಿ. 27 ಮತ್ತು 28ರ ಒಳಗಾಗಿ ತಮ್ಮ ಮಾಹಿತಿಯನ್ನು ನೀಡಿ ಸ್ಥಳ ಕಾಯ್ದಿರಿಸಿಕೊಳ್ಳಬೇಕು. ಮಾಹಿತಿಗೆ 7795344023 ಸಂಪರ್ಕಿಸುವಂತೆ ಕೋರಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 