ಹತ್ಯೆಯಾದ ಕುನ್ನೂರ ಮನೆಗೆ ಶ್ರೀಗಳ ಭೇಟಿ, ಸಾಂತ್ವನ
Basava Jaya Mrityunjaya Swamiji visits Shivananda Kunnur's house
ಶಿಗ್ಗಾವಿ 30: ಪಂಚಮಸಾಲಿ ಪಂಚ ಸೈನ್ಯ ತಾಲೂಕ ಅಧ್ಯಕ್ಷ ಹಾಗೂ ಗುತ್ತಿಗೆದಾರ ಶಿವಾನಂದ ಕುನ್ನೂರ ಅವರನ್ನು ದುಷ್ಕರ್ಮಿಗಳು ಹಾಡುಹಗಲೇ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆಮಾಡಿ ಮರಣ ಹೊಂದಿದ ಕಾರಣ ಇವರ ಮನೆಗೆ ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು ಬೇಟಿ ಕೊಟ್ಟು ಸಾಂತ್ವನ ಹೇಳಿದರು. ಶ್ರೀಗಳ ಪಾದಗಳಿಗೆ ಶಿವಾನಂದ ಕುನ್ನೂರ ಧರ್ಮಪತ್ನಿ ನಮಸ್ಕರಿಸಿ ನನ್ನ ಗಂಡನನ್ನು ಹತ್ಯೆಗೈದವರಿಗೆ ಗಲ್ಲು ಶಿಕ್ಷೆ ಆಗಬೇಕು ಹಾಗೂ ಇನ್ನೂ 5-6 ಜನರ ಹೆಸರು ಹೇಳುತ್ತೇನೆ ಅವರಿಗೆ ಪೋಲಿಸ ತನಿಖೆಯಾಗಿ ಶಿಕ್ಷೆಯಾಗಬೇಕು ಎಂದು ಸ್ವಾಮೀಜಿಗಳಿಗೆ ತಿಳಿಸಿದರು.
ಶ್ರೀಗಳು ಹಾವೇರಿ ಜಿಲ್ಲೆಯ ಹೆಚ್ಚುವರಿ ಪೋಲಿಸ ಅಧೀಕ್ಷಕ ಲಕ್ಷ್ಮಣ ಶಿರಕೋಳ ಅವರಿಗೆ ಪೋನ ಮಾಡಿ ಕುನ್ನೂರ ಕುಟುಂಬಕ್ಕೆ ನ್ಯಾಯಬದಗಿಸುವ ಕೆಲಸವಾಗಬೇಕು ಎಂದರು.ಈ ಸಂದರ್ಭದಲ್ಲಿ ಪಂಚ ಸೈನ್ಯದ ರಾಜ್ಯಾಧ್ಯಕ್ಷ ರುದ್ರಗೌಡ, ಪಂಚಮಸಾಲಿ ಸಮಾಜದ ತಾಲೂಕ ಅಧ್ಯಕ್ಷರಾದ ವೀರೇಶ್ ಆಜೂರ, ಶಿವಾನಂದ ಬಾಗೂರ, ಮುಖಂಡರಾದ ಮಂಜುನಾಥ ಮಣ್ಣಣ್ಣವರ, ಬಸಲಿಂಗಪ್ಪ ನರಗುಂದ ಸೇರಿದಂತೆ ಕುಟುಂಬದ ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 