KLE ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಬಸವ ಜಯಂತಿ ಆಚರಣೆ
ಲೋಕದರ್ಶನ ವರದಿ
ಬೆಳಗಾವಿ 26:KLE ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ , ಡೀಮ್ಡ್-ಟು-ಬಿ ಯುನಿವರ್ಸಿಟಿ (KLE ಡೀಮ್ಡ್ ವಿಶ್ವವಿದ್ಯಾಲಯ), ಬೆಳಗಾವಿ ಸಂಸ್ಥೆಯ ವತಿಯಿಂದ 26 ಏಪ್ರಿಲ್ 2026ರಂದು JNMC ಆವರಣದಲ್ಲಿ 893ನೇ ಬಸವ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಏಐಇ ಡೀಮ್ಡ್ ವಿಶ್ವವಿದ್ಯಾಲಯದ ಕನ್ನಡ ಬಳಗದ ವತಿಯಿಂದ ಅಧಿಕೃತ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಉಪಕುಲಪತಿ ಡಾ. ಸಂದೀಪ್ ಶ್ರೀವಾಸ್ತವ, ಕುಲಸಚಿವ ಡಾ. ವಿ. ಎಂ. ಪಟ್ಟಣಶೆಟ್ಟಿ, ಡಾ. ವಿ. ಡಿ. ಪಾಟೀಲ, ಡಾ. ರಾಜೇಶ್ ಪವಾರ್ ಹಾಗೂ ಡಾ. ಅವಿನಾಶ ಕವಿ, ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರು, ಕರ್ನಾಟಕದ ಸಾಂಸ್ಕೃತಿಕ ಐಕಾನ್ ವಿಶ್ವಗುರು Basavanna ಅವರಿಗೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಸಂದೀಪ್ ಶ್ರೀವಾಸ್ತವ ಅವರು ಬಸವಣ್ಣವರ ಉಪದೇಶಗಳು ಮತ್ತು ವಚನಗಳನ್ನು ಅಳವಡಿಸಿಕೊಳ್ಳುವ ಅಗತ್ಯ ಮತ್ತು ಮಹತ್ವವನ್ನು ಒತ್ತಿಹೇಳಿದರು. ವಿಶೇಷವಾಗಿ ಸಮಾನತೆಯ ತತ್ವ ಮತ್ತು ‘ಕಾಯಕವೇ ಕೈಲಾಸ’ ಎಂಬ ಅವರ ಸಂದೇಶದ ಮಹತ್ವವನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕುಲಸಚಿವ ಡಾ. ವಿ. ಎಂ. ಪಟ್ಟಣಶೆಟ್ಟಿ ಅವರು ಬಸವಣ್ಣವರ ಉಪದೇಶಗಳು ಮತ್ತು ವಚನಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಹಾಗೂ ಇಂದಿನ ಪೀಳಿಗೆ ಅರ್ಥಪೂರ್ಣ ಜೀವನ ನಡೆಸಲು ಅವರ ತತ್ವಗಳನ್ನು ಅನುಸರಿಸಬೇಕು ಎಂದು ಹೇಳಿದರು.
“ಜಾಗತಿಕ ಶಾಂತಿಗೆ ಬಸವ ತತ್ವಶಾಸ್ತ್ರವೇ ಪರಿಹಾರ” ಎಂಬ ವಿಷಯವನ್ನು ಪ್ರತಿಬಿಂಬಿಸುವ ರೂಪಕ ವಾಹನದೊಂದಿಗೆ ಭವ್ಯ ಮೆರವಣಿಗೆ ಏಂಊಇಖ (ಎಓಒಅ ಆವರಣ)ದಿಂದ ಚನ್ನಮ್ಮ ವೃತ್ತದವರೆಗೆ ನಡೆಯಿತು. ನಂತರ ಅದು ನಗರದೆಲ್ಲೆಡೆ ಸಂಚರಿಸಿ ಲಿಂಗರಾಜ್ ಕಾಲೇಜು ಆವರಣದಲ್ಲಿ ಸಮಾಪ್ತಿಯಾಯಿತು.
ಈ ಕಾರ್ಯಕ್ರಮದಲ್ಲಿ ಎಲ್ಲಾ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಘಟಕಗಳ ಮುಖ್ಯಸ್ಥರು, ವಿಶ್ವವಿದ್ಯಾಲಯದ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕನ್ನಡ ಬಳಗದ ಪರವಾಗಿ ಎಓಒಅ ಬೆಳಗಾವಿಯ ಅಧ್ಯಕ್ಷರಾದ ಡಾ. ಅವಿನಾಶ ಕವಿ ಅವರು ಸ್ವಾಗತಿಸಿದರು ಹಾಗೂ ಬಸವಣ್ಣವರ ಜೀವನ, ಉಪದೇಶಗಳು ಮತ್ತು ತತ್ವಶಾಸ್ತ್ರದ ಕುರಿತು ವಿವರಿಸಿದರು. MBBS ವಿದ್ಯಾರ್ಥಿ ಅಭಿಲಾಷ್ ಅವರು ವಿಶ್ವಗುರು ಬಸವಣ್ಣವರ ಜೀವನ ಮತ್ತು ಸಾಧನೆಗಳ ಕುರಿತು ಮಾತನಾಡಿದರು. ಕುಮಾರಿ ಅಮೂಲ್ಯ ಅವರು ಬಸವಣ್ಣವರ ವಚನಗಳನ್ನು ಹಾಡಿದರು.MBBSವಿದ್ಯಾರ್ಥಿನಿ ಕುಮಾರಿ ಸೋನಾಲಿ ಅವರು ವಂದನಾರೆ್ಣ ಸಲ್ಲಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 